Webdunia - Bharat's app for daily news and videos

Install App

ಟಿನ್ ಪ್ಯಾಕ್ಟರಿ ಮೆಟ್ರೋ ನಿಲ್ದಾಣಕ್ಕೆ ನಟ ದಿವಂಗತ ಶಂಕರ್ ನಾಗ್ ಹೆಸರಿಡುವಂತೆ ಒತ್ತಾಯ

Webdunia
ಭಾನುವಾರ, 3 ಅಕ್ಟೋಬರ್ 2021 (16:13 IST)
ಬೆಂಗಳೂರಿನ ಕೆಆರ್ ಪುರಂ ಟಿನ್ ಪ್ಯಾಕ್ಟರಿ ಮೆಟ್ರೋ ನಿಲ್ದಾಣಕ್ಕೆ ನಟ ದಿವಂಗತ ಶಂಕರ್ ನಾಗ್ ಹೆಸರಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸಿಟಿಜನ್ ಕೆ.ಆರ್. ಪುರಂ ಸಂಘಟನೆ ಸದಸ್ಯರಿಂದ ಟಿನ್ ಫ್ಯಾಕ್ಟರಿ ಬಳಿ ಈ ಪ್ರತಿಭಟನೆ ನಡೆದಿದೆ. ಈಗಾಗಲೇ ಬೆಂಗಳೂರಿನಲ್ಲಿ ಎರಡನೇ ಹಂತದ ಮೆಟ್ರೋ ಕಾಮಗಾರಿ ನಡೆಯುತ್ತಿದೆ.  ಯಾವುದಾದರೂ ಒಂದು  ಮೆಟ್ರೋ ನಿಲ್ದಾಣಕ್ಕೆ ನಟ  ಶಂಕರ್ ನಾಗ್ ಅವರ ಹೆಸರಿಡುವ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿದೆ. ಈ ಹಿನ್ನೆಲೆಯಲ್ಲಿ ಟಿನ್ ಫ್ಯಾಕ್ಟರಿ ಸಮೀಪ ನಿರ್ಮಾಣವಾಗುತ್ತಿರುವ ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ಹೆಸರಿಡುವಂತೆ ಸಿಟಿಜನ್ ಕೆ.ಆರ್. ಪುರಂ  ಸಂಘ ಹಾಗೂ ಕರುನಾಡ ಸೇವಕರ ಸಂಘಟನೆ ಸದಸ್ಯರು ಮನವಿ ಮಾಡಿದ್ರು. ನಟ ಶಂಕರನಾಗ್ ಮೂವತ್ತು ವರ್ಷಗಳ ಹಿಂದೆಯೇ ಮೆಟ್ರೊ ಕಲ್ಪನೆಯ ಕನಸು ಕಂಡಿದ್ದರು. ಸ್ವಂತ ದುಡ್ಡಿನಲ್ಲಿ ಇಂಗ್ಲೆಂಡಿಗೆ ತೆರಳಿ ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣದ ಬಗ್ಗೆ ನೀಲಿ ನಕ್ಷೆ ಅನ್ನು ತಂದಿದ್ದರು . ಅವರ  ಸ್ಮರಣಾರ್ಥವಾಗಿ ಟಿನ್ ಫ್ಯಾಕ್ಟರಿ ಮೆಟ್ರೊ ನಿಲ್ದಾಣಕ್ಕೆ ನಟ ಶಂಕರ್ ನಾಗ್ ಅವರ ಹೆಸರು ಅವ್ರ ಸೇವೆಗೆ ನೀಡುವ ಗೌರವವಾಗಿರುತ್ತೆ. ಅಲ್ಲದೇ ಮುಂದಿನ ಪೀಳಿಗೆಗೆ ಶಂಕರ್ ನಾಗ್ ಸಾಧನೆಯನ್ನ ತಿಳಿಯುತ್ತೆ ಎಂದು ಸಿಎಂ ಹಾಗೂ ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments