Webdunia - Bharat's app for daily news and videos

Install App

'ಮತದಾನ ಭಾರತೀಯನ ಮೂಲಭೂತ ಹಕ್ಕು’ ಎಂದು ತಿಳಿಸಿದ ನಟ ವಿಜಯ್

Webdunia
ಬುಧವಾರ, 9 ಮೇ 2018 (14:48 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೆಲವು ಸಿನಿಮಾ ತಾರೆಯರು ರಾಜಕೀಯ ನಾಯಕರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೆ, ಇನ್ನು ಕೆಲವರು ಮತದಾನದ ಬಗ್ಗೆ ತಮ್ಮ ಅಭಿಮಾನಿಗಳಲ್ಲಿ ಅರಿವು ಮೂಡಿಸುತ್ತಿದ್ದಾರೆ.


ಇದೀಗ ನಟ ದುನಿಯಾ ವಿಜಯ್ ಅವರು ಕೂಡ ಮತದಾನದ ಕುರಿತು ತಮ್ಮ ಅಭಿಮಾನಿಗಳಲ್ಲಿ ಅರಿವು ಮೂಡಿಸಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, 'ಮತದಾನ ಭಾರತೀಯನ ಮೂಲಭೂತ ಹಕ್ಕು. ಆ ಹಕ್ಕನ್ನು ಒಬ್ಬ ಉತ್ತಮ ನಾಯಕನನ್ನು ಹುಟ್ಟು ಹಾಕಲು ಬಳಸಿಕೊಳ್ಳಬೇಕು. ನಾನು ಪ್ರತಿ ಚುನಾವಣೆಯಲ್ಲಿಯೂ ತಪ್ಪದೇ ವೋಟ್ ಮಾಡುತ್ತೇನೆ’ ಎಂದು ಹೇಳಿದ್ದಾರೆ.


ಹಾಗೇ ‘ಈಗಾಗಲೇ ಮತದಾನದ ಜಾಗೃತಿಯ ಕುರಿತಂತೆ ಅನೇಕ ಕಲಾವಿದರು ರಾಜಕಾರಣಿಗಳ ಜೊತೆಗೆ ಸೇರಿ ರ್ಯಾಲಿಯನ್ನು ಮಾಡುತ್ತಿದ್ದಾರೆ. ಅನೇಕ ಕಲಾವಿದರು ಚುನಾವಣೆಗೆ ನಿಂತಿದ್ದಾರೆ. ಯಾರು ಏನೇ ಅಂದರೂ ಮತದಾನ ಮಾಡುವುದನ್ನು ಮರೆಯಬಾರದು. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರಿಗೂ ಯಾರಿಗೆ ಮತ ಹಾಕಬೇಕು ಎಂಬ ಗೊಂದಲ ಇದ್ದೇ ಇರುತ್ತದೆ. ಈ ಗೊಂದಲಕ್ಕೆ ನಮ್ಮ ನಾಯಕರೇ ಕಾರಣ. ಎಲ್ಲವನ್ನೂ ಕಲಸುಮೇಲೋಗರ ಮಾಡಿ , ನಿಜವಾದ ನಾಯಕರು ಯಾರು ಎಂಬುದನ್ನು ಗೊತ್ತೇ ಆಗದಂತೆ ಮಾಡಿದ್ದಾರೆ. ಇಂಥವರಿಗೆ ಬುದ್ದಿ ಕಲಿಸಲು ಮತದಾನ ಮಾಡಲೇ ಬೇಕು. ಈಗ ಮತದಾನ ಯಂತ್ರದಲ್ಲಿ ನೋಟಾ ಇದೆ. ನಿಮಗೆ ನಿಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯ ಬಗ್ಗೆ ನಂಬಿಕೆ ಇಲ್ಲದೇ ಹೋದರೆ ನೋಟಾವನ್ನು ಆಯ್ಕೆ ಮಾಡಿಕೊಳ್ಳಬಹುದು' ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments