Webdunia - Bharat's app for daily news and videos

Install App

'ಮತದಾನ ಭಾರತೀಯನ ಮೂಲಭೂತ ಹಕ್ಕು’ ಎಂದು ತಿಳಿಸಿದ ನಟ ವಿಜಯ್

Webdunia
ಬುಧವಾರ, 9 ಮೇ 2018 (14:48 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೆಲವು ಸಿನಿಮಾ ತಾರೆಯರು ರಾಜಕೀಯ ನಾಯಕರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೆ, ಇನ್ನು ಕೆಲವರು ಮತದಾನದ ಬಗ್ಗೆ ತಮ್ಮ ಅಭಿಮಾನಿಗಳಲ್ಲಿ ಅರಿವು ಮೂಡಿಸುತ್ತಿದ್ದಾರೆ.


ಇದೀಗ ನಟ ದುನಿಯಾ ವಿಜಯ್ ಅವರು ಕೂಡ ಮತದಾನದ ಕುರಿತು ತಮ್ಮ ಅಭಿಮಾನಿಗಳಲ್ಲಿ ಅರಿವು ಮೂಡಿಸಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, 'ಮತದಾನ ಭಾರತೀಯನ ಮೂಲಭೂತ ಹಕ್ಕು. ಆ ಹಕ್ಕನ್ನು ಒಬ್ಬ ಉತ್ತಮ ನಾಯಕನನ್ನು ಹುಟ್ಟು ಹಾಕಲು ಬಳಸಿಕೊಳ್ಳಬೇಕು. ನಾನು ಪ್ರತಿ ಚುನಾವಣೆಯಲ್ಲಿಯೂ ತಪ್ಪದೇ ವೋಟ್ ಮಾಡುತ್ತೇನೆ’ ಎಂದು ಹೇಳಿದ್ದಾರೆ.


ಹಾಗೇ ‘ಈಗಾಗಲೇ ಮತದಾನದ ಜಾಗೃತಿಯ ಕುರಿತಂತೆ ಅನೇಕ ಕಲಾವಿದರು ರಾಜಕಾರಣಿಗಳ ಜೊತೆಗೆ ಸೇರಿ ರ್ಯಾಲಿಯನ್ನು ಮಾಡುತ್ತಿದ್ದಾರೆ. ಅನೇಕ ಕಲಾವಿದರು ಚುನಾವಣೆಗೆ ನಿಂತಿದ್ದಾರೆ. ಯಾರು ಏನೇ ಅಂದರೂ ಮತದಾನ ಮಾಡುವುದನ್ನು ಮರೆಯಬಾರದು. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರಿಗೂ ಯಾರಿಗೆ ಮತ ಹಾಕಬೇಕು ಎಂಬ ಗೊಂದಲ ಇದ್ದೇ ಇರುತ್ತದೆ. ಈ ಗೊಂದಲಕ್ಕೆ ನಮ್ಮ ನಾಯಕರೇ ಕಾರಣ. ಎಲ್ಲವನ್ನೂ ಕಲಸುಮೇಲೋಗರ ಮಾಡಿ , ನಿಜವಾದ ನಾಯಕರು ಯಾರು ಎಂಬುದನ್ನು ಗೊತ್ತೇ ಆಗದಂತೆ ಮಾಡಿದ್ದಾರೆ. ಇಂಥವರಿಗೆ ಬುದ್ದಿ ಕಲಿಸಲು ಮತದಾನ ಮಾಡಲೇ ಬೇಕು. ಈಗ ಮತದಾನ ಯಂತ್ರದಲ್ಲಿ ನೋಟಾ ಇದೆ. ನಿಮಗೆ ನಿಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯ ಬಗ್ಗೆ ನಂಬಿಕೆ ಇಲ್ಲದೇ ಹೋದರೆ ನೋಟಾವನ್ನು ಆಯ್ಕೆ ಮಾಡಿಕೊಳ್ಳಬಹುದು' ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಮುಂದಿನ ಸುದ್ದಿ
Show comments