Webdunia - Bharat's app for daily news and videos

Install App

ಬೆದರಿಕೆ ಹಾಕಿ ನನ್ನಿಂದ ಕೆಲಸ ಮಾಡಿಸಿಕೊಂಡರು: ನಟಿ ರನ್ಯಾ ರಾವ್ ಶಾಕಿಂಗ್ ಹೇಳಿಕೆ

Krishnaveni K
ಗುರುವಾರ, 6 ಮಾರ್ಚ್ 2025 (16:27 IST)
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣಿಕೆ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಬೆದರಿಕೆ ಹಾಕಿ ನನ್ನಿಂದ ಕೆಲಸ ಮಾಡಿಸಿದರು ಎಂದು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

ರನ್ಯಾ ರಾವ್ ರನ್ನು ಬಂಧಿಸಲಾಗಿದ್ದು ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡಿಆರ್ ಐ ಅಧಿಕಾರಿಗಳು ರನ್ಯಾರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ರನ್ಯಾ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ.

ರನ್ಯಾ ಪ್ರತೀ ಬಾರಿ ದುಬೈಗೆ ಹೋಗಿ ಚಿನ್ನ ಕಳ್ಳಸಾಗಣಿಕೆ ಮಾಡಿದರೆ ಲಕ್ಷಾಂತರ ರೂಪಾಯಿ ಕಮಿಷನ್ ಸಿಗುತ್ತಿತ್ತು ಎನ್ನಲಾಗಿತ್ತು. ಆದರೆ ವಿಚಾರಣೆ ವೇಳೆ ಇದೇ ಮೊದಲ ಬಾರಿಗೆ ತಾನು ದುಬೈಗೆ ಹೋಗಿ ಚಿನ್ನ ಸಾಗಣಿಕೆ ಮಾಡಿರುವುದಾಗಿ ಹೇಳಿದ್ದಾರೆ.

ತನಗೆ ಬೆದರಿಕೆ ಹಾಕಿ ಈ ಕೆಲಸ ಮಾಡಲಾಗಿದೆ ಎಂದು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಬೆದರಿಕೆ ಹಾಕುತ್ತಿದ್ದವರು, ಕಿಂಗ್ ಪಿನ್ ಯಾರು ಎಂಬ ವಿಚಾರವನ್ನು ಅಧಿಕಾರಿಗಳು ಈಗ ತನಿಖೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments