Select Your Language

Notifications

webdunia
webdunia
webdunia
webdunia

ಐವರು ಪತ್ರಕರ್ತರ ಹತ್ಯೆಗೆ ಸಂಚು: ಎನ್‌ಐಎ ತನಿಖೆಯಿಂದ ಬಹಿರಂಗ

ಐವರು ಪತ್ರಕರ್ತರ ಹತ್ಯೆಗೆ ಸಂಚು: ಎನ್‌ಐಎ ತನಿಖೆಯಿಂದ ಬಹಿರಂಗ
ಬೆಂಗಳೂರು , ಮಂಗಳವಾರ, 11 ಏಪ್ರಿಲ್ 2017 (14:50 IST)
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳು ಐವರು ಪತ್ರಕರ್ತರ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನುವುದು ಎನ್‌ಐಎ ತನಿಖೆಯಿಂದ ಬಹಿರಂಗವಾಗಿದೆ.
 
ಆರೋಪಿಗಳಾದ ಇರ್ಫಾನ್, ವಸೀಂ, ನಜರ್, ಷರೀಫ್, ಆಸೀಫ್ ಐವರು ಪತ್ರಕರ್ತರನ್ನು ಹತ್ಯೆಗೈಯುವ ಸಂಚು ರೂಪಿಸಿದ್ದರು ಎಂದು ಎನ್ಐಎ ಮೂಲಗಳು ತಿಳಿಸಿವೆ.
 
ಬಿಜೆಪಿ ಸಂಸದ ಪ್ರತಾಪ್ ಸಿಂಹ, ವಿಶ್ವೇಶ್ವರ್ ಭಟ್, ವಿಜಯ್ ಸಂಕೇಶ್ವರ್ ಮತ್ತಿಬ್ಬರು ಮಾಧ್ಯಮ ಮುಖ್ಯಸ್ಥರ ಹತ್ಯೆಗೆ ಸಂಚು ರೂಪಿಸಿದ್ದರ ಬಗ್ಗೆ ಪೊಲೀಸ್ ತನಿಖೆ ವೇಳೆಯಲ್ಲಿ ಆರೋಪಿಗಳು ಬಾಯಿಬಿಟ್ಟಿದ್ದಾರೆ.
 
ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳು ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟು ಹೊಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಾವಿನ ಜೊತೆ ಸರಸವಾಡಲು ಹೋಗಿ ಪ್ರಾಣವನ್ನೇ ಬಿಟ್ಟ..!