Webdunia - Bharat's app for daily news and videos

Install App

ವಕೀಲರನ್ನು ಪ್ಯಾನಲ್​​ಗೆ ಸೇರಿಸಿಕೊಳ್ಳುವುದು ಬ್ಯಾಂಕ್​​ನ ವಿವೇಚನೆಗೆ ಬಿಟ್ಟ ವಿಚಾರ...!

Webdunia
ಶುಕ್ರವಾರ, 10 ಡಿಸೆಂಬರ್ 2021 (20:38 IST)
ಬೆಂಗಳೂರು: ವಕೀಲರನ್ನು ಪ್ಯಾನಲ್​​ಗೆ ಸೇರಿಸಿಕೊಳ್ಳುವುದು ಬ್ಯಾಂಕ್​​ನ ವಿವೇಚನೆಗೆ ಬಿಟ್ಟ ವಿಚಾರ. ಇಂತಹ ವಿಷಯಗಳಲ್ಲಿ ರಿಟ್ ಕೋರ್ಟ್ ಸಾಮಾನ್ಯವಾಗಿ ಮಧ್ಯಪ್ರವೇಶಿಸಲು ಮತ್ತು ಆಳವಾಗಿ ಪರೀಕ್ಷಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ತಮ್ಮನ್ನು ಬ್ಯಾಂಕ್ ಪ್ಯಾನಲ್​​ನಿಂದ ಕೈಬಿಟ್ಟ ಕ್ರಮ ಪ್ರಶ್ನಿಸಿ ವಕೀಲ ತಿಮ್ಮಣ್ಣ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ, ವಕೀಲರನ್ನು ಪ್ಯಾನಲ್​​ಗೆ ಸೇರಿಸಿಕೊಳ್ಳುವುದು ಬ್ಯಾಂಕ್ ವಿವೇಚನೆಗೆ ಬಿಟ್ಟಿರುವ ವಿಚಾರ. ಹಾಗೆಯೇ ಇದೊಂದು ಕಕ್ಷಿದಾರ ಮತ್ತು ವಕೀಲರ ನಡುವಿನ ಸಂಬಂಧದಂತೆಯೇ ಇರುತ್ತದೆ. ಇಂತಹ ವಿಚಾರಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಾಗದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿವಾದಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಯಾವುದೇ ಮುನ್ಸೂಚನೆ ನೀಡದೇ, ನೋಟಿಸನ್ನೂ ಕೊಡದೇ ವಕೀಲರನ್ನು ಪ್ಯಾನಲ್​​ನಿಂದ ಕೈಬಿಟ್ಟಿದೆ. ಈ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿದ್ದರು. ವಾದ ಪರಿಗಣಿಸಿಲು ನಿರಾಕರಿಸಿರುವ ಪೀಠ, ಪ್ಯಾನಲ್​​ಗೆ ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಬ್ಯಾಂಕ್​​ಗೆ ಬಿಟ್ಟಿ ವಿಚಾರ. ಬ್ಯಾಂಕ್​​ನ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments