Publish Date: Sun, 02 Apr 2023 (14:47 IST)
Updated Date: Sun, 02 Apr 2023 (14:50 IST)
ಐಪಿಎಲ್ ಕ್ರಿಕೆಟ್ ಮ್ಯಾಚ್ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚಿನ ಬಸ್ ಕಾರ್ಯಾಚರಣೆ ಮಾಡಲಿದೆ.೧೦ ಕ್ಕೂ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಿದೆ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬೇರೆ ಕಡೆ ತೆರಳಲು ಹೆಚ್ಚಿನ ಸಾರಿಗೆ ವ್ಯವಸ್ಥೆಯನ್ನ ಸಾರಿಗೆ ಇಲಾಖೆ ಕಲ್ಪಿಸಿದೆ.ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ದಿನ IPL ನಡೆಯಲಿದ್ದು,ಏ 2, 10, 17, 26 ಹಾಗೂ ಮೇ 21ರಂದು ಐಪಿಎಲ್ ನಡೆಯಲಿರುವ ಈ ವೇಳೆ ಪಂದ್ಯಾವಳಿ ವೀಕ್ಷಣೆಗೆ ಆಗಮಿಸುವ ಜನರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.ರಾತ್ರಿ 11 ಗಂಟೆಗೆ ಮ್ಯಾಚ್ ಮುಗಿಸಿ ರಾತ್ರಿ ವೇಳೆ ತೆರಳಲು ಹೆಚ್ಚಿನ ಬಸ್ ಕಾರ್ಯಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನ್ ಸಿಟಿ, ಬನ್ನೇರುಘಟ್ಟ ನ್ಯಾ.ಪಾರ್ಕ್, ಕೆಂಗೇರಿ KHB ಕಾಲೋನಿ, ಬಾಗಲೂರು ಯಲಹಂಕ ಹೊಸಕೋಟೆ ಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.