Webdunia - Bharat's app for daily news and videos

Install App

ಜೈಲು ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದ ಎಡಿಜಿಪಿ ಮೇಘರಿಕ್

Webdunia
ಶುಕ್ರವಾರ, 21 ಜುಲೈ 2017 (13:48 IST)
ಜೈಲಿನಲ್ಲಿರುವ ಎಲ್ಲ ಕೈದಿಗಳೂ ಸಮಾನ, ಯಾರಿಗೂ ವಿಶೇಷ ಸೌಲಭ್ಯ ಒದಗಿಸುವಂತಿಲ್ಲ ಎಂದು ಕಾರಾಗೃಹದ ಎಡಿಜಿಪಿ ಎನ್.ಎಸ್. ಮೇಘರಿಕ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದ್ದ ಮೇಘರಿಕ್, ಜೈಲಿನಲ್ಲಿ ಪರಿಶೀಲನೆ ನಡೆಸಿ ಸಿಬ್ಬಂದಿಗೆ ಖಡಕ್ ಸೂಚನೆ ಕೊಟ್ಟರು. ಒಂದೇ ಅಡುಗೆ ಮನೆಯಲ್ಲಿ ಎಲ್ಲರಿಗೂ ಊಟ ತಯಾರಾಗಬೇಕು. ಜೈಲಿನಲ್ಲಿ ಎಲ್ಲರೂ ಸಮಾನರು. ಯಾರಿಗೂ ವಿಶೇಷ ಸೌಲಭ್ಯ ನೀಡುವಂತಿಲ್ಲ ಎಂದು ಸೂಚಿಸಿದರು.

ಇದೇವೇಳೆ, ಕೈದಿಗಳ ಭೇಟಿಗೆ ಬರುವವರ ಬಳಿ ಹಣ ಪಡೆದರೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮೇಘರಿಕೆ ಎಚ್ಚರಿಕೆ ನೀಡಿದ್ದಾರೆ. ಕೈದಿಗಳ ಭೇಟಿಗೆ ಬರುವ ಪ್ರತಿಯೊಬ್ಬರನ್ನೂ ಪರಿಶೀಲನೆ ನಡೆಸಬೇಕು, ಹೆಸರನ್ನ ರಿಜಿಸ್ಟ್ರಾರ್`ನಲ್ಲಿ ನಮೂದಿಸಬೇಕು. ಜೈಲಿಗೆ ತರುವ ಪ್ರತಿಯೊಂದು ವಸ್ತುವನ್ನ ಪರಿಶೀಲನೆ ನಡೆಸಬೇಕೆಂದು ಸೂಚಿಸಿದ್ದಾರೆ.

ಜೈಲಿನಲ್ಲಿ ಅಕ್ರಮ ನಡೆಯುತ್ತದೆ ಎಂದು ಡಿಐಜಿ ರೂಪಾ ವರದಿ ನೀಡಿದ ಬಳಿಕ ಎಚ್ಚೆತ್ತಿರುವ ಅಧಿಕಾರಿಗಳು ಜೈಲಿನ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments