Publish Date: Sun, 25 Sep 2022 (19:37 IST)
Updated Date: Sun, 25 Sep 2022 (19:48 IST)
ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ S.M.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜ್ವರ ಹೆಚ್ಚಾಗಿದ್ದ ಹಿನ್ನೆಲೆ ನಿನ್ನೆ ರಾತ್ರಿ ಹಳೇ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಕೆ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಅವರಿಗೆ ಉಸಿರಾಟದ ಸೋಂಕು ಇದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇನ್ನು S.M.ಕೃಷ್ಣ ಮೈಸೂರು ಶ್ವಾಸಕೋಶಶಾಸ್ತ್ರ HOD, ಡಾ.ಸತ್ಯನಾರಾಯಣ ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಮತ್ತು ವಿಶಾಲವಾದ ವಿಶೇಷ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.