Webdunia - Bharat's app for daily news and videos

Install App

ವಾರ್ಷಿಕ ಅಮರನಾಥ ಯಾತ್ರೆಗೆ ಶುರುವಾಗಿದೆ ಮುಂಗಡ ನೋಂದಣಿ, ಜೂನ್‌ 29ರಿಂದ ಯಾತ್ರೆ ಶುರು

Sampriya
ಸೋಮವಾರ, 15 ಏಪ್ರಿಲ್ 2024 (14:33 IST)
Photo Courtesy Facebook
ಕಾಶ್ಮೀರ:  ದಕ್ಷಿಣ ಕಾಶ್ಮೀರದಲ್ಲಿರುವ 3,880 ಮೀಟರ್ ಎತ್ತರದ ಗುಹಾ ದೇಗುಲಕ್ಕೆ ತೆರಳುವ 52 ದಿನಗಳ ವಾರ್ಷಿಕ ಅಮರನಾಥ ಯಾತ್ರೆಯು ಜೂನ್ 29 ರಂದು ಪ್ರಾರಂಭವಾಗಿ ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ. ಯಾತ್ರೆಗೆ ಸೋಮವಾರ ಮುಂಗಡ ನೋಂದಣಿ ಆರಂಭವಾಗಿದೆ.

ಅಮರನಾಥ ಯಾತ್ರೆಯ ಪ್ರಯಾಣವನ್ನು ಎರಡು ಮಾರ್ಗಗಳ ಮೂಲಕ ಕೈಗೊಳ್ಳಬಹುದು. ದಕ್ಷಿಣ ಕಾಶ್ಮೀರದ ಅನಂತನಾಗ್‌ನ ಪಹಲ್ಗಾಮ್ ಮೂಲಕ 48-ಕಿಮೀ ಮಾರ್ಗದಲ್ಲಿ ಮತ್ತು ಮಧ್ಯ ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯಿಂದ ಬಾಲ್ಟಾಲ್‌ ಮೂಲಕ 14 ಕಿಮೀ ಮಾರ್ಗದಲ್ಲಿ ತೆರಳಬಹುದು. ಆದರೆ ಈ ಮಾರ್ಗ ಕಡಿದಾದ ಹಾದಿಯನ್ನು ಹೊಂದಿದೆ ಎಂದು ಅಮರನಾಥ ಶ್ರೈನ್ ಬೋರ್ಡ್ (ಎಸ್‌ಎಎಸ್‌ಬಿ) ಪ್ರಕಟಣೆ ತಿಳಿಸಿದೆ.

ಮುಂಗಡ ನೋಂದಣಿ ಇಂದು ಜಮ್ಮುವಿನ ಬ್ಯಾಂಕ್ ಶಾಖೆಗಳಲ್ಲಿ ಆರಂಭವಾಗಿದೆ. ದೇಶಾದ್ಯಂತ ಪಿಎನ್‌ಬಿಯ (ಪಂಜಾಬ್ ನ್ಯಾಷನಲ್ ಬ್ಯಾಂಕ್) 540 ಶಾಖೆಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಎಸ್‌ಎಎಸ್‌ಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾತ್ರೆಗೆ 13 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅಥವಾ 75 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಆರು ವಾರ ತುಂಬಿದ ಗರ್ಭಿಣಿಯರು ನೋಂದಣಿ ಮಾಡಿಕೊಳ್ಳುವಂತಿಲ್ಲ ಎಂದು ಬೋರ್ಡ್‌ ಪ್ರಕಟಣೆ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments