Webdunia - Bharat's app for daily news and videos

Install App

ಬಸ್, ಮೆಟ್ರೊ, ನೀರು ಬಳಿಕ ನಂದಿನಿ ಹಾಲಿನ ದರವೂ ಏರಿಕೆ: ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಒಂದೇ ಬಾಕಿ

Krishnaveni K
ಬುಧವಾರ, 19 ಫೆಬ್ರವರಿ 2025 (12:29 IST)
ಬೆಂಗಳೂರು: ರಾಜ್ಯದ ಜನತೆಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಬಸ್, ಮೆಟ್ರೊ, ನೀರು ಬಳಿಕ ಈಗ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸುದ್ದಿಯಾಗಿದೆ. ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಒಂದೇ ಬಾಕಿ ಎನ್ನಲಾಗಿದೆ.

ನಂದಿನಿ ಹಾಲಿನ ದರವನ್ನು 5 ರೂ.ಗಳಷ್ಟು ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಈಗ ಸಿಎಂ ಅಂಕಿತ ಬೀಳುವುದಷ್ಟೇ ಬಾಕಿ ಎನ್ನಲಾಗಿದೆ. ಸಿಎಂ ಒಪ್ಪಿಗೆ ಕೊಟ್ಟರೆ ಹಾಲು ಕೂಡಾ ದುಬಾರಿಯಾಗಲಿದೆ.

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಮಧ್ಯಮ ವರ್ಗಕ್ಕೆ ಹಾಲು ಮತ್ತೊಂದು ಹೊರೆಯಾಗಲಿದೆ. ಹಾಲು ದಿನನಿತ್ಯದ ಅಗತ್ಯ ವಸ್ತುವಾಗಿದೆ. ಹೀಗಾಗಿ ಇದನ್ನು ಖರೀದಸದೇ ಕೂರುವಂತೆಯೂ ಇಲ್ಲ.

ಈಗಾಗಲೇ ರಾಜ್ಯ ಸರ್ಕಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರೀ ಸ್ವಾಮ್ಯದ ಬಸ್ ಟಿಕೆಟ್ ದರವನ್ನು ಶೇ.15 ರಷ್ಟು ಏರಿಕೆ ಮಾಡಿದೆ. ಮೆಟ್ರೊ ಪ್ರಯಾಣ ದರವೂ ಕಳೆದ ವಾರ ಏರಿಕೆಯಾಗಿದೆ. ಕಾವೇರಿ ನೀರಿನ ದರ ಏರಿಕೆ ಬಗ್ಗೆ ಈ ವಾರದ ಅಂತ್ಯಕ್ಕೆ ತೀರ್ಮಾನವಾಗಲಿದೆ. ಮುಂದಿನ ತಿಂಗಳಿನಿಂದ ವಿದ್ಯುತ್ ಕೂಡಾ ದುಬಾರಿಯಾಗಲಿದೆ.

ಇದರ ನಡುವೆ ಈಗ ಹಾಲಿನ ದರ ಏರಿಕೆ ಸುದ್ದಿ ಬಂದಿದೆ.ಕೆಎಂಎಫ್ ಕಳೆದ ಡಿಸೆಂಬರ್ ನಲ್ಲೇ ಸರ್ಕಾರಕ್ಕೆ ಹಾಲಿನ ದರ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ದರ ಏರಿಕೆ ಅನಿವಾರ್ಯ ಎಂದಿತ್ತು. ಹೀಗಾಗಿ ಈ ಬಾರಿ ಸಿಎಂ ಹಾಲು ದರ ಏರಿಕೆಗೆ ಸಮ್ಮತಿ ನೀಡಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments