Webdunia - Bharat's app for daily news and videos

Install App

ಬಸ್, ಮೆಟ್ರೊ, ನೀರು ಬಳಿಕ ನಂದಿನಿ ಹಾಲಿನ ದರವೂ ಏರಿಕೆ: ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಒಂದೇ ಬಾಕಿ

Krishnaveni K
ಬುಧವಾರ, 19 ಫೆಬ್ರವರಿ 2025 (12:29 IST)
ಬೆಂಗಳೂರು: ರಾಜ್ಯದ ಜನತೆಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಬಸ್, ಮೆಟ್ರೊ, ನೀರು ಬಳಿಕ ಈಗ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸುದ್ದಿಯಾಗಿದೆ. ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಒಂದೇ ಬಾಕಿ ಎನ್ನಲಾಗಿದೆ.

ನಂದಿನಿ ಹಾಲಿನ ದರವನ್ನು 5 ರೂ.ಗಳಷ್ಟು ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಈಗ ಸಿಎಂ ಅಂಕಿತ ಬೀಳುವುದಷ್ಟೇ ಬಾಕಿ ಎನ್ನಲಾಗಿದೆ. ಸಿಎಂ ಒಪ್ಪಿಗೆ ಕೊಟ್ಟರೆ ಹಾಲು ಕೂಡಾ ದುಬಾರಿಯಾಗಲಿದೆ.

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಮಧ್ಯಮ ವರ್ಗಕ್ಕೆ ಹಾಲು ಮತ್ತೊಂದು ಹೊರೆಯಾಗಲಿದೆ. ಹಾಲು ದಿನನಿತ್ಯದ ಅಗತ್ಯ ವಸ್ತುವಾಗಿದೆ. ಹೀಗಾಗಿ ಇದನ್ನು ಖರೀದಸದೇ ಕೂರುವಂತೆಯೂ ಇಲ್ಲ.

ಈಗಾಗಲೇ ರಾಜ್ಯ ಸರ್ಕಾರ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರೀ ಸ್ವಾಮ್ಯದ ಬಸ್ ಟಿಕೆಟ್ ದರವನ್ನು ಶೇ.15 ರಷ್ಟು ಏರಿಕೆ ಮಾಡಿದೆ. ಮೆಟ್ರೊ ಪ್ರಯಾಣ ದರವೂ ಕಳೆದ ವಾರ ಏರಿಕೆಯಾಗಿದೆ. ಕಾವೇರಿ ನೀರಿನ ದರ ಏರಿಕೆ ಬಗ್ಗೆ ಈ ವಾರದ ಅಂತ್ಯಕ್ಕೆ ತೀರ್ಮಾನವಾಗಲಿದೆ. ಮುಂದಿನ ತಿಂಗಳಿನಿಂದ ವಿದ್ಯುತ್ ಕೂಡಾ ದುಬಾರಿಯಾಗಲಿದೆ.

ಇದರ ನಡುವೆ ಈಗ ಹಾಲಿನ ದರ ಏರಿಕೆ ಸುದ್ದಿ ಬಂದಿದೆ.ಕೆಎಂಎಫ್ ಕಳೆದ ಡಿಸೆಂಬರ್ ನಲ್ಲೇ ಸರ್ಕಾರಕ್ಕೆ ಹಾಲಿನ ದರ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ದರ ಏರಿಕೆ ಅನಿವಾರ್ಯ ಎಂದಿತ್ತು. ಹೀಗಾಗಿ ಈ ಬಾರಿ ಸಿಎಂ ಹಾಲು ದರ ಏರಿಕೆಗೆ ಸಮ್ಮತಿ ನೀಡಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments