Webdunia - Bharat's app for daily news and videos

Install App

ದಸರಾ ನಂತರ ನಿಗಮ ಮಂಡಳಿಗಳ ಅಧ್ಯಕ್ಷ , ಉಪಾಧ್ಯಕ್ಷರ ನೇಮಕ

Webdunia
ಶುಕ್ರವಾರ, 7 ಅಕ್ಟೋಬರ್ 2016 (12:46 IST)
ನಾಡಹಬ್ಬ ದಸರಾ ನಂತರ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬ ದಸರಾ ನಂತರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಅನುಮತಿ ಪಡೆದು ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪೂರ್ಣಗೊಳಿಸಲಾಗುತ್ತದೆ. ಈಗಾಗಲೇ ಈ ಕುರಿತು ಎಲ್ಲರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು. 
 
ಸುಪ್ರೀಂಕೋರ್ಟ್ ಸೂಚನೆಯಂತೆ ಕಾವೇರಿ ಜಲಾನಯನ ಪ್ರದೇಶದ ವಸ್ತುಸ್ಥಿತಿ ಅಧ್ಯಯನ ಮಾಡಲು ಇಂದು ಕೇಂದ್ರದ ತಾಂತ್ರಿಕ ತಂಡ ಆಗಮಿಸಿದೆ. ನಮ್ಮ ಕಡೆಯಿಂದ ಎಲ್ಲಾ ಮಾಹಿತಿಗಳನ್ನು ನೀಡುತ್ತೇವೆ. ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು.
 
ರಾಜಕೀಯಕ್ಕೆ ಡಾ.ಯತೀಂದ್ರ ಆಗಮನ......
 
ನನ್ನ ಪುತ್ರ ಡಾ.ಯತೀಂದ್ರನನ್ನು ಬಲವಂತವಾಗಿ ರಾಜಕೀಯಕ್ಕೆ ಕರೆತರುವುದಿಲ್ಲ. ರಾಕೇಶ್ ಅಕಾಲಿಕ ನಿಧನದ ನಂತರ ಯತೀಂದ್ರ ವರುಣಾ ಕ್ಷೇತ್ರವನ್ನು ನೋಡಿಕೊಳ್ಳುತ್ತಿದ್ದಾನೆ. ನಾನು ರಾಜ್ಯದ ಮುಖ್ಯಮಂತ್ರಿಯಾದ ಕಾರಣ ಸ್ವ-ಕ್ಷೇತ್ರದ ಕಡೆ ಹೆಚ್ಚು ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಜನತೆ ಬಯಸಿದರೇ ಯತೀಂದ್ರ ರಾಜ್ಯ ರಾಜಕೀಯಕ್ಕೆ ಬರುತ್ತಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments