Webdunia - Bharat's app for daily news and videos

Install App

ಡಿಕೆಶಿ ಬಳಿಕ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕುಂಭಮೇಳದಲ್ಲಿ ಪುಣ್ಯ ಸ್ನಾನ

Sampriya
ಶನಿವಾರ, 22 ಫೆಬ್ರವರಿ 2025 (17:49 IST)
Photo Courtesy X
ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿರುವ  ಕಾಂಗ್ರೆಸ್ ಸರ್ಕಾರ ಮಹಿಳೆಯರ, ಜನರಿಗೆ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡಿದೆ ಎಂದ ಸಂಸದ ಬಸವರಾಜ ಬೊಮ್ಮಾಯಿ ವಿರುದ್ದ  ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡು ಬೊಮ್ಮಾಯಿ ಅವರಿಗೆ ದಿನೇಶ್ ಗುಂಡೂರಾವ್ ಅವರು ತಿರುಗೇಟು ನೀಡಿದರು.

ಬಸವರಾಜ ಬೊಮ್ಮಾಯಿಯವರು ಈಗ ಸರ್ವಸಂಪನ್ನರಂತೆ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ‌ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ.


ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.?

ಬೊಮ್ಮಾಯಿಯವರೆ, 2023ರಲ್ಲಿ‌ ನೀವು ಮರಳಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಗೊತ್ತಿತ್ತು. ಹಾಗಾಗಿ ಅಧಿಕಾರ ಬಿಡುವ ಮುನ್ನ ಬಜೆಟ್ ವೆಚ್ಚಕ್ಕಿಂತ 7 ಪಟ್ಟು ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದಿರಿ. ಆ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಹಣ ಪಾವತಿ ಯಾರು ಮಾಡಬೇಕು.? ನಿಮ್ಮ ಸ್ವಂತ ಖಜಾನೆಯಿಂದ ಕೊಡುವಂತೆ ಅಪ್ರಸ್ತುತ ಕಾಮಗಾರಿಗಳಿಗೆ ಅನುಮೋದನೆ ಕೊಟ್ಟಾಗ ಪ್ರಜ್ಞೆ ಇರಲಿಲ್ಲವೆ.? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ.?

ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿದ್ದಾಗ ಎಂದಾದರೂ ಕೇಂದ್ರ ಸರ್ಕಾರದ ತೆರಿಗೆ ಅನ್ಯಾಯದ ಬಗ್ಗೆ ಎದೆಯೆತ್ತಿ ಮಾತಾಡಿದ್ದೀರಾ.? ಹೋಗಲಿ‌ ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯಾದರೂ ಬಾಯಿ ಬಿಟ್ಟಿದ್ದೀರಾ.? ಮೋದಿಯವರ ಮುಂದೆ ನಡು ಬಗ್ಗಿಸಿ ನಿಂತಿದ್ದೆ ನಿಮ್ಮ ಸಾಧನೆಯಲ್ಲವೆ.? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ.?

ಬೊಮ್ಮಾಯಿಯವರೆ, ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರ್ಕಾರ 58 ಸಾವಿರ ಕೋಟಿ ಮೀಸಲಿರಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಎಷ್ಟೋ ಮನೆಗಳ ದೀಪ ಉರಿಯುತ್ತಿದೆ ಎಂಬ ಅರಿವು ನಿಮಗರಲಿ. ನಿಮ್ಮ ನೇತೃತ್ವದ ಸರ್ಕಾರವಿದ್ದಾಗ ಯಾವುದಾದರೂ ಒಂದೇ ಒಂದು ಜನಪರ ಕಾರ್ಯಕ್ರಮ ಮಾಡಿದ ಉದಾಹರಣೆ ಇದೆಯೆ.? ರಾಜ್ಯದ ಖಜಾನೆ ಲೂಟಿ ಹೊಡದಿದ್ದೆ ನಿಮ್ಮ ಸರ್ಕಾರದ ಹೆಗ್ಗಳಿಕೆಯಲ್ಲವೆ.?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments