Webdunia - Bharat's app for daily news and videos

Install App

ಗಣೇಶ ಹಬ್ಬ ಮಾತ್ರವಲ್ಲ ಈದ್ ಮಿಲಾದ್ ಗೂ ಡಿಜೆಗೆ ನಿಷೇಧ: ರಾಜ್ಯ ಸರ್ಕಾರ ಹೊರಡಿಸಿದ ನಿಯಮಗಳೇನು

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (14:05 IST)
ಬೆಂಗಳೂರು: ಮೊನ್ನೆಯಷ್ಟೇ ಗಣೇಶ ಹಬ್ಬಕ್ಕೆ ಡಿಜೆ, ಪಟಾಕಿಗೆ ನಿಷೇಧ ಹೇರಿ ವಿವಾದಕ್ಕೊಳಗಾಗಿದ್ದ ರಾಜ್ಯ ಸರ್ಕಾರ ಈಗ ಮುಸಲ್ಮಾನರ ಈದ್ ಮಿಲಾದ್ ಹಬ್ಬಕ್ಕೂ ಕೆಲವು ಷರತ್ತು ವಿಧಿಸಿದೆ.

ಗಣೇಶ ಹಬ್ಬದಂತೇ ಈದ್ ಮಿಲಾದ್ ಮೆರವಣಿಗೆಯಲ್ಲೂ ಡಿಜೆ ಸೌಂಡ್ ಹಾಕುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆಗಳು ನಡೆಯುವ ಸಾಧ್ಯತೆ ಹಿನ್ನಲೆಯಲ್ಲಿ ಹರಿತವಾದ ಆಯುಧಗಳನ್ನು ಕೊಂಡೊಯ್ಯುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಗಣೇಶ ಹಬ್ಬ ಆಚರಣೆಗೆ ಹಲವು ಷರತ್ತು ವಿಧಿಸಿದ್ದು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಮುಂದೆ ಈದ್ ಮಿಲಾದ್ ಗೂ ಇದೇ ರೀತಿ ಷರತ್ತು ಹಾಕುತ್ತೀರಾ ಎಂದು ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿತ್ತು. ಇದೀಗ ಈದ್ ಮಿಲಾದ್ ಗೂ ಕೆಲವೊಂದು ನಿಯಮಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ರಾತ್ರಿ ಅವಧಿ ಮೀರಿ ಸೌಂಡ್ ಮಾಡುವಂತಿಲ್ಲ, ಡಿಜೆ ಸೌಂಡ್ ಹಾಕಿ ಅಕ್ಕಪಕ್ಕದವರಿಗೆ ತೊಂದರೆ ಮಾಡುವಂತಿಲ್ಲ ಇತ್ಯಾದಿ ಷರತ್ತು ವಿಧಿಸಿದೆ. ಆದರೆ ಇದು ಎಷ್ಟರಮಟ್ಟಿಗೆ ಪಾಲನೆಯಾಗುತ್ತದೆ ನೋಡಬೇಕಿದೆ. ಯಾಕೆಂದರೆ ಗಣೇಶ ಹಬ್ಬಕ್ಕೂ ಡಿಜೆ ಹಾಕುವಂತಿಲ್ಲ ಎಂದರೂ ಯಥಾವತ್ತಾಗಿ ಡಿಜೆ ಹಾಕಿ ಹಬ್ಬ ಮಾಡಲಾಗಿತ್ತು. ಆದರೆ ಇತ್ತೀಚೆಗೆ ಗಣೇಶ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಈದ್ ಮಿಲಾದ್ ಗೂ ಕಠಿಣ ನಿಯಮ ಜಾರಿಗೆ ತರಲು ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments