Webdunia - Bharat's app for daily news and videos

Install App

ಗೃಹಲಕ್ಷ್ಮಿ ಮಾತ್ರವಲ್ಲ, ಕಳೆದ ಮೂರು ತಿಂಗಳಿನಿಂದ ಅನ್ನಭಾಗ್ಯ ಹಣವೂ ಬರ್ತಿಲ್ಲ

Krishnaveni K
ಸೋಮವಾರ, 16 ಸೆಪ್ಟಂಬರ್ 2024 (09:58 IST)
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಹಣ ಸರಿಯಾಗಿ ಖಾತೆಗೆ ಬರುತ್ತಿಲ್ಲ ಎಂದು ಸಿಟ್ಟಾಗಿದ್ದ ಜನತೆಗೆ ಈಗ ಮತ್ತೊಂದು ಬರೆ. ಅನ್ನಭಾಗ್ಯ ಹಣವೂ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳಿಗೆ ಜಮೆ ಆಗಿಲ್ಲ.

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಸಿದ್ದರಾಮಯ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ ಅಕ್ಕಿ ಕೊರತೆಯಿಂದಾಗಿ 5 ಕೆ.ಜಿ. ಅಕ್ಕಿ ಮತ್ತು ಉಳಿದ 5 ಕೆ.ಜಿ ಬಾಬ್ತು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿತ್ತು.

ಆದರೆ ಕಳೆ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಿಲ್ಲ. ತಲಾ 34 ರೂ.ನಂತೆ ಪ್ರತೀ ತಿಂಗಳು 170 ರೂ. ಫಲಾನುಭವಿಗಳಿಗೆ ನೀಡಬೇಕಿದೆ. ಆದರೆ ಕಳೆದ ಮೂರು ತಿಂಗಳಿನಿಂದ ಹಣ ಬರದೇ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಪ್ರತೀ ದಿನ ಖಾತೆ ಪರಿಶೀಲಿಸುವುದೇ ಆಗಿದೆ.

ಆದರೆ ಹಣ ಬಂದಿಲ್ಲ ಎಂದು ಸರ್ಕಾರದ ಮೇಲೆ ಆಕ್ರೋಶಗೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳ ಕತೆ ಇದೇ ಆಗಿದೆ. ಸರ್ಕಾರಕ್ಕೆ ಉಚಿತ ಭಾಗ್ಯಗಳನ್ನು ಕೊಡಿ ಎಂದು ನಾವಾಗಿ ಕೇಳಿಲ್ಲ. ಕೊಡುತ್ತೇವೆ ಎಂದಿರುವ ಸರ್ಕಾರ ಕೊಡದೇ ಹೀಗೆ ಮೋಸ ಮಾಡುತ್ತಿರುವುದು ಯಾಕೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Wing Commander assault: ಸುಳ್ಳು ಕತೆ ಕಟ್ಟಿ ಕನ್ನಡಿಗನನ್ನೇ ಅಪರಾಧಿ ಮಾಡಿದ ವಿಂಗ್ ಕಮಾಂಡರ್ ಗೆ ತಕ್ಕ ಪಾಠ ಕಲಿಸಲು ಮುಂದಾದ ಪೊಲೀಸರು

Karnataka Caste census report: 30 ವರ್ಷಗಳ ಮುಸ್ಲಿಮರ ಜನ ಸಂಖ್ಯೆ ಶೇ 90 ರಷ್ಟು ಹೆಚ್ಚು

Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಮುಂದಿನ ಸುದ್ದಿ
Show comments