ಹನಿಟ್ರ್ಯಾಪ್ ಆಯ್ತು, ಈಗ ಸಚಿವರ ಫೋನ್ ಟ್ರ್ಯಾಪ್ ಆರೋಪ: ಕರ್ನಾಟಕದಲ್ಲಿ ಇದೇನಾಗ್ತಿದೆ

Krishnaveni K
ಸೋಮವಾರ, 24 ಮಾರ್ಚ್ 2025 (13:48 IST)
ಬೆಂಗಳೂರು: ರಾಜ್ಯ ರಾಜಕಾರಣ ಯಾವ ಮಟ್ಟ ತಲುಪಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಹನಿಟ್ರ್ಯಾಪ್ ಆರೋಪದ ಬೆನ್ನಲ್ಲೇ ಈಗ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ.

ಸದನದಲ್ಲೇ ಹನಿ ಟ್ರ್ಯಾಪ್ ಪ್ರಕರಣ ಭಾರೀ ಸದ್ದು ಮಾಡಿತ್ತು. ಸಚಿವ ಕೆಎನ್ ರಾಜಣ್ಣ ಅವರೇ ಹನಿಟ್ರ್ಯಾಪ್ ಆರೋಪ ಮಾಡಿದ್ದರು. ನನ್ನನ್ನು ಎರಡು ಬಾರಿ ಹನಿಟ್ರ್ಯಾಪ್ ಮಾಡಲು ಯತ್ನ ನಡೆದಿತ್ತು ಎಂದಿದ್ದರು. ಇದಲ್ಲದೆ, ಆಡಳಿತ, ವಿಪಕ್ಷ ಸೇರಿದಂತೆ 40 ಕ್ಕೂ ಹೆಚ್ಚು ರಾಜಕೀಯ ನಾಯಕರ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದಿದ್ದರು.

ಈ ಆರೋಪ ಭಾರೀ ಸದ್ದು ಮಾಡುತ್ತಿರುವಾಗಲೇ ಈಗ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ. ರಾಜ್ಯದ ಕೆಲವು ಪ್ರಭಾವೀ ಸಚಿವರು, ಶಾಸಕರ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಕೆಲವು ನಾಯಕರು ಈಗಾಗಲೇ ಮೌಖಿಕ ದೂರು ಸಲ್ಲಿಸಿದ್ದಾರೆ. ಹನಿಟ್ರ್ಯಾಪ್ ಬಗ್ಗೆ ಇದುವರೆಗೆ ಯಾರೂ ಅಧಿಕೃತ ದೂರು ನೀಡಿಲ್ಲ. ಅಧಿಕೃತ ದೂರು ನೀಡದೇ ತನಿಖೆ ಮಾಡಲು ಆಗಲ್ಲ ಎಂದು ಗೃಹಸಚಿವರು ಕೈ ಚೆಲ್ಲಿ ಕೂತಿದ್ದಾರೆ. ಅದರ ನಡುವೆ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ. ಇದನ್ನೆಲ್ಲಾ ನೋಡುತ್ತಿದ್ದರೆ ರಾಜ್ಯ ರಾಜಕಾರಣ ಎತ್ತ ಸಾಗುತ್ತಿದೆ ಎಂಬ ಆತಂಕ ಮೂಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments