Webdunia - Bharat's app for daily news and videos

Install App

ಮುಡಾ ಹಗರಣ ಇಫೆಕ್ಟ್: ಯಾವ ಯೋಜನೆಗೂ ಚಾಲನೆ ಸಿಕ್ತಿಲ್ಲ

Krishnaveni K
ಸೋಮವಾರ, 7 ಅಕ್ಟೋಬರ್ 2024 (11:42 IST)
ಬೆಂಗಳೂರು: ಮುಡಾ ಹಗರಣ ವಿಚಾರ ರಾಜ್ಯದಲ್ಲಿ ಸದ್ದು ಮಾಡಲಾರಂಭಿಸಿದ ಮೇಲೆ ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿದೆ. ಇತ್ತ ಕೋರ್ಟ್ ಗೂ ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳುವುದರತ್ತಲೇ ಗಮನ ಹರಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಅದರ ಬೆನ್ನಲ್ಲೇ ಮುಖ್ಯಮಂತ್ರಿಗಳು ತಮ್ಮ ಕಾರ್ಯಕ್ರಮ ಪಟ್ಟಿಗಳನ್ನು ಕಡೇ ಕ್ಷಣದಲ್ಲಿ ಬದಲು ಮಾಡುತ್ತಿದ್ದಾರೆ. ಕೆಲವು ಉದ್ಘಾಟನಾ ಕಾರ್ಯಕ್ರಮಗಳಿಗೆ ಸಿಎಂ ಗೈರಾಗುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳೇ ರದ್ದಾಗುತ್ತಿದೆ. ಇದಕ್ಕೆ ತಕ್ಕಂತೆ ಸಚಿವರೂ ವಿಧಾನಸೌಧಕ್ಕೆ ಬರುವುದೇ ಕಡಿಮೆಯಾಗಿದೆ.

ಕೆಲವೊಬ್ಬ ಸಚಿವರು ತಮ್ಮ ಇಲಾಖೆಗಳನ್ನೇ ಮರೆತಿದ್ದಾರೆ. ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸುತ್ತಿಲ್ಲ. ಇದರಿಂದಾಗಿ ಆಡಳಿತಕ್ಕೆ ತುಕ್ಕು ಹಿಡಿದಂತಾಗಿದೆ. ಸಚಿವರುಗಳೇ ಅಸಡ್ಡೆ ತೋರಿರುವಾಗ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ವಿಪರ್ಯಾಸವೆಂದರೆ ಪ್ರತಿಪಕ್ಷವೂ ಇದರ ಬಗ್ಗೆ ಸಶಕ್ತವಾಗಿ ಧ್ವನಿಯೆತ್ತುತ್ತಿಲ್ಲ. ಒಟ್ಟಿನಲ್ಲಿ ಹಗರಣಗಳ ಬಿಸಿ ನಡುವೆ ಜನರ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾಯುಭಾರ ಕುಸಿತ ಪರಿಣಾಮ ಇಂದು ಈ ಜಿಲ್ಲೆಗಳಲ್ಲಿ ಮಳೆ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಮುಂದಿನ ಸುದ್ದಿ
Show comments