Webdunia - Bharat's app for daily news and videos

Install App

ಪೆಟ್ರೋಲ್, ಹಾಲು, ತರಕಾರಿ ಬಳಿಕ ಈಗ ಆಟೋ ಕೂಡಾ ದುಬಾರಿ: ಇದೆಲ್ಲಾ ಗ್ಯಾರಂಟಿಗೆ ಸಿಕ್ಕ ಪ್ರತಿಫಲ

Krishnaveni K
ಗುರುವಾರ, 27 ಜೂನ್ 2024 (10:18 IST)
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಒಂದಾದ ಮೇಲೊಂದರಂತೆ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್, ಹಾಲು ಬಳಿಕ ಈಗ ಆಟೋ ಕೂಡಾ ದುಬಾರಿಯಾಗುವ ಸುಳಿವು ಸಿಕ್ಕಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಈಗ ಆಟೋ ಕೂಡಾ ದುಬಾರಿಯಾಗುವ ಸಾಧ್ಯತೆಯಿದೆ. ಈ ಸುಳಿವನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಆಟೋದವರೂ ದರ ಏರಿಕೆ ಮಾಡಲು ಮನವಿ ಸಲ್ಲಿಸಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಪ್ರಸ್ತಾವನೆಯನ್ನು ಸಾರಿಗೆ ಆಯುಕ್ತರಿಗೆ ಕಳುಹಿಸಲಾಗಿದೆ.  ಅವರು ಕಮಿಟಿಯೊಂದಿಗೆ ಚರ್ಚಿಸಿ ನಿರ್ಧಾರ ಮಾಡಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳ ಸಂಬಳ ಹೆಚ್ಚಳವಾಗುವಂತೆ ಇದೂ ಆಗುತ್ತದೆ ಎಂದು ಸಚಿವರು ಉತ್ತರಿಸಿದ್ದು, ಆಟೋ ದರ ಹೆಚ್ಚಳವಾಗುವುದು ಖಚಿತಪಡಿಸಿದ್ದಾರೆ.

ಇದೆಲ್ಲಾ ಗ್ಯಾರಂಟಿ ಯೋಜನೆಗಳ ಫಲವೇ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತೀ ಬಾರಿ ಒಂದೊಂದು ನೆಪ ಹೇಳಿ ಸರ್ಕಾರ ಒಂದೊಂದರದ್ದೇ ಬೆಲೆ ಏರಿಕೆ ಮಾಡುತ್ತಿದ್ದರೆ ಜನ ಜೀವನ ದುಸ್ತರವಾಗುತ್ತಿದೆ. ಈ ಚಂದಕ್ಕೆ ಗ್ಯಾರಂಟಿಗಳು ಬೇಕಿತ್ತಾ ಎಂದು ಜನ ಮಾತನಾಡಿಕೊಳ್ಳುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments