Webdunia - Bharat's app for daily news and videos

Install App

ವಿಜಯಪುರ ಬಳಿಕ ಧಾರವಾಡದಲ್ಲೂ ರೈತರ ಜಮೀನು ವಕ್ಫ್ ಬೋರ್ಡ್ ಪಾಲಾಗಿರುವುದು ಬೆಳಕಿಗೆ

Krishnaveni K
ಸೋಮವಾರ, 28 ಅಕ್ಟೋಬರ್ 2024 (16:57 IST)
Photo Credit: Instagram
ಧಾರವಾಡ: ವಿಜಯಪುರದಲ್ಲಿ ರೈತರ ಜಮೀನು ವಶಪಡಿಸಿಕೊಳ್ಳಲು ವಕ್ಫ್ ಬೋರ್ಡ್ ನೋಟಿಸ್ ನೀಡಿದ ವಿಚಾರ ಭುಗಿಲೆದ್ದಿರುವ ಬೆನ್ನಲ್ಲೇ ಈಗ ಧಾರವಾಡದಲ್ಲೂ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ.

ಧಾರವಾಡದ ಉಪ್ಪಿನ ಬೆಟಗೇರಿ ಗ್ರಾಮದ ಕೆಲವು ರೈತರ ಜಮೀನು ಪಹಣಿ ಪತ್ರದಲ್ಲಿ ಆಸ್ತಿ ವಕ್ಫ್ ಬೋರ್ಡ್ ಗೆ ಒಳಪಟ್ಟಿದೆ ಎಂದು ನಮೂದಾಗಿದ್ದು ಇದನ್ನು ತಿದ್ದುಪಡಿ ಮಾಡಲು ಈಗ ಹೆಣಗಾಡುತ್ತಿದ್ದಾರೆ. ವಿಜಯಪುರದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಧಾರವಾಡದ ಪ್ರಕರಣ ಬೆಳಕಿಗೆ ಬಂದಿದೆ.

ಪಹಣಿ ಪತ್ರದಲ್ಲಿ 2021, 2022 ಮತ್ತು 2023 ರಲ್ಲಿ ರೈತರ ಜಮೀನು ವಕ್ಫ್ ಬೋರ್ಡ್ ಗೆ ಸೇರಿದ್ದು ಎಂದು ನಮೂದಾಗಿದೆ. ಇದೇ ಆಸ್ತಿ ಪಹಣಿಯನ್ನು 2018, 2019 ರಲ್ಲಿ ನೋಡಿದ್ದಾಗ ವಕ್ಫ್ ಬೋರ್ಡ್ ಗೆ ಸೇರಿದ್ದು ಎಂದು ಇರಲಿಲ್ಲ. ಆದರೆ ಈಗ ದಿಡೀರ್ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಇಲ್ಲಿ ವರ್ಷಗಳಿಂದಲೂ ಉಳುಮೆ ಮಾಡುತ್ತಾ ಬಂದಿರುವ ರೈತರ ಆತಂಕಕ್ಕೆ ಕಾರಣವಾಗಿದೆ.

ಉಪ್ಪಿನ ಬೆಟಗೇರಿ ಗ್ರಾಮದ ರೈತರ ಈ ಜಮೀನುಗಳು ಅವರು ಯಾರಿಂದಲೂ ದಾನವಾಗಿ ಪಡೆದಿದ್ದಲ್ಲ. ಪಿತ್ರಾರ್ಜಿತವಾಗಿ ಬಂದ ಆಸ್ತಿ. ಆದರೂ ಜಮೀನು ವಕ್ಫ್ ಗೆ ಸೇರಿದೆ ಎಂದು ನಮೂದಾಗಿದ್ದು, ಇದನ್ನು ತಿದ್ದುಪಡಿ ಮಾಡಿಸಲು ಕಚೇರಿಗಳಿಗೆ ಅಲೆದಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments