Select Your Language

Notifications

webdunia
webdunia
webdunia
webdunia

ಕಾವೇರಿಯಿಂದ ದೂರ ಉಳಿದ ಮಂಡ್ಯದ ಗಂಡು ಅಂಬರೀಶ!

ಕಾವೇರಿಯಿಂದ ದೂರ ಉಳಿದ ಮಂಡ್ಯದ ಗಂಡು ಅಂಬರೀಶ!
ಬೆಂಗಳೂರು , ಸೋಮವಾರ, 3 ಅಕ್ಟೋಬರ್ 2016 (15:29 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು. ಆದರೆ, ಸದನಕ್ಕೆ ಗೈರು ಹಾಜರಾಗುವ ಮೂಲಕ ಮಾಜಿ ಸಚಿವ ಹಾಗೂ ನಟ ಅಂಬರೀಶ್, ಕಾವೇರಿ ವಿಚಾರದಿಂದ ದೂರ ಉಳಿದಿದ್ದಾರೆ.
 
ಕಾವೇರಿ ನದಿಯಿಂದ 6 ದಿನಗಳ ಕಾಲ ಒಟ್ಟು 36 ಟಿಎಂಸಿ ನೀರು ಹರಿಸುವಂತೆ ಹಾಗೂ ಕೇವಲ 4 ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮತ್ತೆ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು.
 
ಈ ಹಿಂದೆ ನಡೆದ ಒಂದು ದಿನದ ವಿಶೇಷ ವಿಧಾನ ಮಂಡಲ ಅಧಿವೇಶನ ಹಾಗೂ ಸರ್ವಪಕ್ಷ ಸಭೆಯಲೂ ಸಹ ಅಂಬರೀಶ್ ಭಾಗಿಯಾಗಿರಲಿಲ್ಲ. ಇದೀಗ ಅವರು ಬೆಂಗಳೂರಿನಲ್ಲೇ ಇದ್ದರೂ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಕಾವೇರಿ ವಿಚಾರದಿಂದ ದೂರ ಉಳಿದಿದ್ದಾರೆ.
 
ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಅಂಬರೀಶ್, ಖಮರುಲ್ ಇಸ್ಲಾಂ, ಹಾಗೂ ವಿ.ಶ್ರೀನಿವಾಸ್ ಪ್ರಸಾದ್ ವಿಧಾನಮಂಡಲ ಅಧಿವೇಶನದಿಂದ ದೂರು ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿವಾದ: ಕರ್ನಾಟಕ ಬಲಿಪಶು, ವಿಲನ್‌ ಅಲ್ಲ ಎಂದ ಸಿದ್ದು