Select Your Language

Notifications

webdunia
webdunia
webdunia
webdunia

ಮತ್ತೆ ಶುರುವಾಯ್ತು ಕಾಂಗ್ರೆಸ್ ನಲ್ಲಿ ನಾ ಕೊಡೆ, ನಾ ಬಿಡೆ ಜಗಳ!

ಮತ್ತೆ ಶುರುವಾಯ್ತು ಕಾಂಗ್ರೆಸ್ ನಲ್ಲಿ ನಾ ಕೊಡೆ, ನಾ ಬಿಡೆ ಜಗಳ!
ಬೆಂಗಳೂರು , ಶನಿವಾರ, 1 ಸೆಪ್ಟಂಬರ್ 2018 (10:57 IST)
ಬೆಂಗಳೂರು: ಸೆಪ್ಟೆಂಬರ್ ನಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿರುವುದರಿಂದ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆ ಜೋರಾಗಿದೆ.

ಹಿರಿಯ ನಾಯಕರಿಗೆ ಈ ಬಾರಿ ಸಚಿವರ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಣ ಒತ್ತಾಯಿಸುತ್ತಿದೆ. ರಾಮಲಿಂಗಾ ರೆಡ್ಡಿ, ಎಚ್ ಕೆ ಪಾಟೀಲ್ ರಂತಹ ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡಲು ಒತ್ತಾಯ ಹೆಚ್ಚಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಿರಿಯರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿರುವುದು ನಿಜ. ಆದರೆ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ. ಈಗಾಗಲೇ ಸಚಿವರಾಗಿರುವ ಶಾಸಕರ ಸ್ಥಾನ ಪಲ್ಲಟ ಕುರಿತು ಬಂದಿರುವ ಸುದ್ದಿಗಳೆಲ್ಲವೂ ಊಹಾಪೋಹ. ಹೊಸ ಖಾತೆಗಳ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಈ ಸಾಮೂಹಿಕ ಅತ್ಯಾಚಾರದ ಹಿಂದಿನ ಕಾರಣ ಕೇಳಿದ್ರೆ ಶಾಕ್ ಆಗ್ತೀರಿ!