Select Your Language

Notifications

webdunia
webdunia
webdunia
Sunday, 13 April 2025
webdunia

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ, ಸಿದ್ದರಾಮಯ್ಯ ಮುಖ್ಯಮಂತ್ರಿ- ಮಹದೇವಪ್ಪ

ಚುನಾವಣೆ
ಬೆಂಗಳೂರು , ಗುರುವಾರ, 15 ಫೆಬ್ರವರಿ 2018 (22:05 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೆಲ್ಲವನ್ನೂ ಈಡೇರಿಸಲಾಗಿದೆ. ಅಧಿಕಾರಕ್ಕೆ ಬರುವ ಸಲುವಾಗಿಯೇ ಉತ್ತಮವಾಗಿ ಕೆಲಸ ಮಾಡಲಾಗಿದೆ. ಆದ್ದರಿಂದ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಮಂಡಿಸಲಿರುವ ಬಜೆಟ್ ಕೂಡ ಜನಪರವಾಗಿರುತ್ತದೆ. ಬಡವರ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಡಿ.ಕೆ.ಶಿವಕುಮಾರಗೆ ಐಟಿ ಶಾಕ್- ಮೂರು ಎಫ್ಐಆರ್