Webdunia - Bharat's app for daily news and videos

Install App

ಬಿಎಸ್‌ವೈಗೆ ಸೆಡ್ಡುಹೊಡೆಯಲು ಮತ್ತೆ ಬ್ರಿಗೇಡ್ ಮೊರೆಹೋದ ಈಶ್ವರಪ್ಪ

Webdunia
ಬುಧವಾರ, 19 ಏಪ್ರಿಲ್ 2017 (17:54 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಮುನಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ, ರಾಜ್ಯದಾದ್ಯಂತ ರಾಯಣ್ಣ ಯುವ ಬ್ರಿಗೇಡ್‌ ಸಂಘಟಿಸಿ ಸೆಡ್ಡುಹೊಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ಯಡಿಯೂರಪ್ಪ ಉದ್ದೇಶಪೂರ್ವಕವಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆತಂಕಗೊಂಡಿರುವ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಯನ್ನು ವಿಸ್ತರಿಸಿ ಬಲವನ್ನು ಹೆಚ್ಚಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪ್ರತಿಯೊಂದು ಜಿಲ್ಲೆಯಲ್ಲೂ ಬ್ರಿಗೇಡ್‌ನ ಯುವ ಘಟಕಗಳನ್ನು ರಚಿಸಿ ಪದಾಧಿಕಾರಿಗಳನ್ನು ಘೋಷಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಒಂದೊಂದು ತಂಡದಲ್ಲಿ ಅಹಿಂದ್ ಮತ್ತು ಅತೃಪ್ತ ಬಿಜೆಪಿ ಯುವಕರಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ.
 
ಶಾಸಕರ ಭವನದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಪೂರ್ವ ಸಿದ್ದತೆ ಸಭೆಯಲ್ಲಿ ಯುವ ಘಟಕ ರಚನೆ ಕುರಿತಂತೆ  ಚರ್ಚೆ ನಡೆಸಲಾಗಿದೆ. ನಾಳೆ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಈಶ್ವರಪ್ಪ ತಿಳಿಸಿದ್ದಾರೆ. 
 
ಸಭೆಯಲ್ಲಿ ಬ್ರಿಗೇಡ್‌ನ ಗೌರವಾಧ್ಯಕ್ಷ ಮುಕುಡಪ್ಪ, ಅಧ್ಯಕ್ಷ ವೀರುಪಾಕ್ಷಪ್ಪ ಸೇರಿದಂತೆ ಇತರ ಗಣ್ಯರು ಉಪಸ್ಥಿತಿರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments