ಬಿಜೆಪಿಯಲ್ಲಿ ಮತ್ತೆ ಅಸಮಧಾನ? ಈಶ್ವರಪ್ಪ ನೇತೃತ್ವದಲ್ಲಿ ಇಂದು ಸಭೆ

Webdunia
ಶನಿವಾರ, 11 ಫೆಬ್ರವರಿ 2017 (09:30 IST)
ಬೆಂಗಳೂರು: ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ತಣ್ಣಗಾಗಿದೆ ಎಂದುಕೊಳ್ಳುತ್ತಿರುವಾಗಲೇ ಮತ್ತೆ ಅಸಮಧಾನದ ಹೊಗೆ ಕಾಣುತ್ತಿದೆ. ಇಂದು ಬಂಡಾಯ ನಾಯಕ ಈಶ್ವರಪ್ಪ ನೇತೃತ್ವದಲ್ಲಿ ಅತೃಪ್ತರ ಸಭೆ ನಡೆಯಲಿದೆ.

 
ಶಾಸಕರ ಭವನದಲ್ಲಿ ಈಶ್ವರಪ್ಪ ಮತ್ತು ಬೆಂಬಲಿಗರು ಸಭೆ ನಡೆಸಲಿದ್ದಾರೆ. ರಾಷ್ಟ್ರಾಧ್ಯಕ್ಷರ ಎದುರು ಒಪ್ಪಿಕೊಂಡಂತೆ ಪದಾಧಿಕಾರಿಗಳ ಬದಲಾವಣೆ ಇನ್ನೂ ಆಗಿಲ್ಲ. ಈಗಾಗಲೇ ಹೇಳಿದ ಅವಧಿ ಮುಗಿದರೂ ಇದರ ಬಗ್ಗೆ ಚಕಾರವೆತ್ತದೇ ಇರುವುದು ಈಶ್ವರಪ್ಪ ಬೆಂಬಲಿಗರ ಅತೃಪ್ತಿಗೆ ಕಾರಣವಾಗಿದೆ.

ರಾಯಣ್ಣ ಬ್ರಿಗೇಡ್ ನಲ್ಲಿ ಪಾಲ್ಗೊಂಡ ಕೆಲ ಪದಾಧಿಕಾರಿಗಳ ಅಮಾನತು ಹಿಂಪಡೆಯಬೇಕು, ಈಗಾಗಲೇ ಆಯ್ಕೆಯಾಗಿರುವ ಪದಾಧಿಕಾರಿಗಳ ಬದಲಾವಣೆ ಆಗಬೇಕು ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ. ಇದೇ ವೇಳೆ ರಾಯಣ್ಣ ಬ್ರಿಗೇಡ್ ನಿಂದ ಯಾವುದೇ ಸಮಾವೇಶ ಮಾಡದಿರಲು ಮತ್ತು ಇದರಿಂದ ಈಶ್ವರಪ್ಪ ಹಿಂದೆ ಸರಿಯುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಡಿಕೆ ಶಿವಕುಮಾರ್ ಗೆ ನನ್ನ ಜಾಗದಲ್ಲಿ ನೀನು ಕೂತ್ಕೋ ಎಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments