Select Your Language

Notifications

webdunia
webdunia
webdunia
webdunia

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಾಧ್ಯಮಗಳ ವಿರುದ್ಧ ಅಗ್ನಿ ಶ್ರೀಧರ್ ಕಿಡಿಕಿಡಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಾಧ್ಯಮಗಳ ವಿರುದ್ಧ ಅಗ್ನಿ ಶ್ರೀಧರ್ ಕಿಡಿಕಿಡಿ
ಬೆಂಗಳೂರು , ಶನಿವಾರ, 11 ಫೆಬ್ರವರಿ 2017 (17:21 IST)
ಸಣ್ಣ ದೀಪವನ್ನು ಜ್ವಾಲೆಯನ್ನಾಗಿ ಮಾಡಿ ಬಿತ್ತರಿಸುತ್ತಿದ್ದೀರಿ ಎಂದು ಅಗ್ನಿ ಶ್ರೀಧರ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
ಅನಾರೋಗ್ಯದಿಂದಾಗಿ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಗೆ ದಾಖಲಾಗಿರುವ ಶ್ರೀಧರ್, ಇನ್ನೂ ಎರಡು ದಿನಗಳ ಕಾಲ ಚಿಕಿತ್ಸೆ ಪಡೆಯಬೇಕಾಗಿತ್ತು. ಆದರೆ, ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ನೋಡಿ ಡಿಸ್ಚಾರ್ಜ್ ಆಗುತ್ತಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕೆಲ ದಿನಗಳ ಹಿಂದೆ ಪೊಲೀಸರು ಅಗ್ನಿ ಶ್ರೀಧರ್ ನಿವಾಸದ ಮೇಲೆ ದಾಳಿ ನಡೆಸಿದಾಗ ಲೈಸೆನ್ಸ್ ಇಲ್ಲದ ಕೆಲ ಗನ್‌ಗಳು ಪತ್ತೆಯಾಗಿದ್ದವು. ಪೊಲೀಸರು ಶ್ರೀಧರ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ದಾಖಲಿಸಿದ್ದರು.
 
ಪೊಲೀಸರ ದಾಳಿಯ ನಂತರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಧರ್, ಪೊಲೀಸರ ಬಂಧನದಿಂದ ಬಚಾವ್ ಆಗಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹೈಕಮಾಂಡ್‌ಗೆ ಸಾವಿರ ಕೋಟಿ ನೀಡಿರುವುದು ಸಾಬೀತುಪಡಿಸಿ: ಬಿಎಸ್‌ವೈಗೆ ಸಿಎಂ ಸವಾಲ್