Publish Date: Sat, 16 Sep 2023 (15:23 IST)
Updated Date: Sat, 16 Sep 2023 (15:40 IST)
ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಹೈದ್ರಾಬಾದ್ನಲ್ಲಿ AICC ಕಾಂಗ್ರೆಸ್ ಕಾರ್ಯಕಾರಿ ಮಂಡಳಿ ಸಭೆ ಶುರುವಾಗಲಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ 32 ಮಂದಿ ವರ್ಕಿಂಗ್ ಕಮಿಟಿ ಸದಸ್ಯರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವೀರಪ್ಪ ಮೊಯ್ಲಿ, ಸಿಎಂ ಸಿದ್ದರಾಮಯ್ಯ ಸೇರಿ 84 ಮಂದಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ತೆಲಂಗಾಣ, ಮಧ್ಯಪ್ರದೇಶ, ರಾಜಸ್ತಾನ, ಮಿಜೋರಾಂ, ಛತ್ತೀಸ್ ಘಡ ವಿಧಾನಸಭಾ ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುತ್ತಿದೆ.