Select Your Language

Notifications

webdunia
webdunia
webdunia
webdunia

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಭೇಟಿ ರದ್ದು

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಭೇಟಿ ರದ್ದು
ಬೆಂಗಳೂರು , ಭಾನುವಾರ, 30 ಜುಲೈ 2017 (15:00 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
 
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನಿಧನ ಮತ್ತು ಉಪರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸವನ್ನು ಮೊಟಕುಗೊಳಿಸಲಾಗಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
 
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನಿಧನದಿಂದ ಅವರ ಕುಟುಂಬ ಶೋಕಾಚರಣೆಯಲ್ಲಿರುವುದರಿಂದ ರಾಯಚೂರು ಸಮಾವೇಶವನ್ನು ಮುಂದೂಡವಂತೆ ಕೆಪಿಸಿಸಿಗೆ ಸೂಚನೆ ನೀಡಲಾಗಿದೆ.
 
ರಾಯಚೂರು ಸಮಾವೇಶಕ್ಕೆ 12 ದಿನಗಳ ನಂತರ ಒಂದು ದಿನಾಂಕವನ್ನು ನಿಗದಿಪಡಿಸುವಂತೆ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಜಿ,ಪರಮೇಶ್ವರ್‌ಗೆ ನಿರ್ದೇಶನ ನೀಡಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ಕೋಸ್ಟ್ ಗಾರ್ಡ್‌ನಿಂದ 3500 ಕೋಟಿ ಮೌಲ್ಯದ ಡ್ರಗ್ಸ್ ವಶ