Webdunia - Bharat's app for daily news and videos

Install App

ಅರಬ್ಬಿ ಸಮುದ್ರದ ಲಕ್ಷದ್ವೀಪ ಹಾಗೂ ಬಂಗಾಳಕೊಲ್ಲಿಯ ಆಗ್ನೇಯದಲ್ಲಿ ವಾಯುಭಾರ ಕುಸಿತ

Webdunia
ಶನಿವಾರ, 16 ಅಕ್ಟೋಬರ್ 2021 (22:06 IST)
ಅರಬ್ಬಿ ಸಮುದ್ರದ ಲಕ್ಷದ್ವೀಪ ಕೆಳಗೆ ಮತ್ತು ಬಂಗಾಳಕೊಲ್ಲಿಯ ಆಗ್ನೇಯ ವಾಯುಭಾರ ಕುಸಿತವಾಗಿದೆ, ಕರ್ನಾಟಕದಲ್ಲಿ ಎ. 17 ರವರೆಗೂ ಮಳೆ ಮುಂದುವರಿಯಲಿದೆ. ಭಾನುವಾರ 16 ಜಿಲ್ಲೆಗಳಿಗೆ ಯಲ್ಲೋ ಅಲಟ್ ೯ ನೀರು.
ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಭಾನುವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಂದಿ ಬೆಟ್ಟದಲ್ಲಿ ಉಗಮವಾಗುವ ಪಾಪಾಗ್ನಿ ನದಿ ಶಿಡ್ಲಘಟ್ಟ, ಬಾಗೇಪಲ್ಲಿ, ಚೇಳೂರು ಮಾರ್ಗವಾಗಿ ಹರಿದು ಆಂಧ್ರಪ್ರದೇಶದ ಕಂದಕೂರು ಮೂಲಕ ದಕ್ಷಿಣಾಭಿಮುಖವಾಗಿ ಹರಿದು ಯಾಸರಾಯನ ಜಲಶಾಯಕ್ಕೆ ಸೇರಿಕೊಳ್ಳುತ್ತದೆ. ನದಿಯ ಹರಿವಿನಿಂದ ಕೆಲವು ಹಳ್ಳಿಗಳಿಗೆ ಸಂಪರ್ಕ ಕಡಿತಗೊಂಡಿದೆ. ಜೋಳ, ಭತ್ತ, ರಾಗಿ, ಅವರೆ ಬೆಳೆಗಳು ಕೊಚ್ಚಿ ಹೋಗಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ಶಿಡ್ಲಘಟ್ಟ ತಾಲೂಕು ದಿಂಬಾರ್ಲಹಳ್ಳಿ ಸೇತುವೆ ಹೊಡೆದು ಬೆಳೆಗೆ ಮಳೆ ನೀರು ನುಗ್ಗಿದೆ.
ಇನ್ನು ವರುಣನ ಆರ್ಭಟಕ್ಕೆ ಬೆಂಗಳೂರು ನಗರದ ಹೆಚ್.ಎಸ್.ಆರ್ ಲೇಟಿಂಗ್ ಚರಂಡಿಗಳು ತುಂಬಿ ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿದೆ.
ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನ ಕೆಂಗಾಪುರ ಗ್ರಾಮ ಸೇತುವೆ ಬಳಿ ಇರುವ ಸೂಳೆಕೆರೆ ಹಳ್ಳ ಮಳೆಯಿಂದ ತುಂಬಿ ಹರಿಯುತ್ತಿರುವ ನೀರು, ಮಕ್ಕಳ ಮಕ್ಕಳ ವಾಹನ ಸವಾರರು ರಸ್ತೆ ದಾಟಲು ಪರದಾಡುತ್ತಿದ್ದಾರೆ. ಕೋಲಾರ ಜಿಲ್ಲೆಯ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತಿದೆ. ಬಳಕೆಯ ಕೆರೆಗಳು ಭರ್ತಿಯಾಗಿ ಕೋಡಿ ತುಂಬಿ ಹರಿಯುತ್ತಿರುವ ನೀರು. 20 ವರ್ಷಗಳಿಂದ ಖಾಲಿಯಿದ್ದ ಕೆರೆಗಳು ಭರ್ತಿ ಆಗಿದ್ದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.
ಸಾವಿರಾರು ಏಕರೆಯ ವಿಸ್ತೀರ್ಣದ ಮುದುವಾಡಿ ಕೆರೆಯೂ ಸಹ 20 ವರ್ಷಗಳ ನಂತರ ಭರ್ತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments