Webdunia - Bharat's app for daily news and videos

Install App

ಬಿಎಂಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ 5 ಹೆಚ್ಚುವರಿ ಮಾರ್ಗಗಳಲ್ಲಿ ವಾಯು ವಜ್ರ ಸೇವೆ

Webdunia
ಭಾನುವಾರ, 2 ಜನವರಿ 2022 (21:09 IST)
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ನಾಳೆಯಿಂದ ಹೆಚ್ಚುವರಿಯಾಗಿ ಐದು ಮಾರ್ಗಗಳಲ್ಲಿ 'ವಾಯು ವಜ್ರ' ಹವಾನಿಯಂತ್ರಿತ ಬಸ್‌ಗಳ ಸೇವೆಯನ್ನು ಬಿಎಂಟಿಸಿ ಆರಂಭಿಸಲಿದೆ ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
 
ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್, ಕೆಂಪೇಗೌಡ ಬಸ್ ನಿಲ್ದಾಣದಿಂದ ಜನಪ್ರಿಯ ಟೌನ್‌ಶಿಪ್, ಕಾವೇರಿ ಭವನದಿಂದ ದೊಡ್ಡಬಳ್ಳಾಪುರ, ಕೆಂಪೇಗೌಡ ಬಸ್ ನಿಲ್ದಾಣದಿಂದ ವೈಟ್‌ಫೀಲ್ಡ್ ಟಿಟಿಎಂಸಿ, ಹೆಬ್ಬಾಳದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಮಾರ್ಗಗಳಲ್ಲಿ ವಜ್ರ ಸೇವೆ ಆರಂಭಿಸಲಾಗುವುದು ಎಂದು ಬಿಎಂಟಿಸಿ ಹೇಳಿದೆ.
 
ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾಡುಗೋಡಿ ಬಸ್ ನಿಲ್ದಾಣದವರೆಗೆ ಮತ್ತು ಬನಶಂಕರಿ ಟಿಟಿಎಂಸಿಯಿಂದ ಐಟಿಪಿಎಲ್‌ವರೆಗೆ ಹವಾನಿಯಂತ್ರಿತ ಸಾರಿಗೆ ಸೇವೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದೂ ಉಲ್ಲೇಖಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments