Webdunia - Bharat's app for daily news and videos

Install App

ಲವ್ವರ್ ನೋಡಲು ಬಂದ ಗಗನಸಖಿ ಸೂಸೈಡ್: ಆತ್ಮಹತ್ಯೆಯೋ, ಕೊಲೆಯೋ..?

Webdunia
ಶನಿವಾರ, 11 ಮಾರ್ಚ್ 2023 (18:40 IST)
ದೂರದ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಅಂತರಾಷ್ಟ್ರೀಯ ಏರ್ ಲೈನ್ ನಲ್ಲಿ ಗಗನಸಖಿಯಾಗಿದ್ದ ಯುವತಿ ಬಹುಡಿ ಕಟ್ಟಡದಿಂದ ಬಿದ್ದು ಸೂಸೈಡ್ ಮಾಡಿಕೊಂಡಿದ್ದಾಳೆ. ಅರ್ಚನಾ ಧೀಮಾನ್ ಮೃತ ದುರ್ದೈವಿ.ಪ್ರಿಯಕರ ಆದೇಶ್ ವಾಸವಿದ್ದ ಕೋರಮಂಗಲದ ಎಂಟನೇ ಬ್ಲಾಕ್ ನಲ್ಲಿದ್ದ ರೇಣುಕಾ ರೆಸಿಡೆನ್ಸಿ ಅಪಾರ್ಟ್ಮೆಂಟ್ ನಾಲ್ಕನೇ ಮಹಡಿಯಿಂದ ಬಿದ್ದು  ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 
ಅರ್ಚನಾ ಧೀಮಾನ್ ಮೂಲತಃ ಹಿಮಾಚಲ ಪ್ರದೇಶದಳವಾಗಿದ್ದು, ಕೇರಳ ಮೂಲದ ಆದೇಶ್ ಎಂಬ ಟೆಕ್ಕಿಯನ್ನ ಪ್ರೀತಿಸುತ್ತಿದ್ದಳು. ಆದೇಶ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡಿಕೊಂಡಿದ್ದ. ಡೇಟಿಂಗ್ ಆ್ಯಪ್ ಮೂಲಕ ಗಗನಸಖಿ ಅರ್ಚನಾ ಹಾಗೂ ಆದೇಶ್ ಪರಿಚಯವಾಗಿ ಇಬ್ಬರಿಗೂ ಲವ್ ಆಗಿದೆ. ಪ್ರಿಯಕರ ಆದೇಶ್  ನೋಡಲು ಅರ್ಚನಾ ಬೆಂಗಳೂರಿನ ಕೋರಮಂಗಲಕ್ಕೆ  ಬಂದಿದ್ದಳು‌. ನಿನ್ನೆ ರಾತ್ರಿ ಇಬ್ಬರು ಪೋರಂ ಮಾಲ್ ಗೆ ಹೋಗಿ ಸಿನಿಮಾ ನೋಡಿಕೊಂಡು ಬಂದಿದ್ದಾರೆ. ತಡರಾತ್ರಿಯವರೆಗೂ ಇಬ್ಬರು ಪಾರ್ಟಿ ಮಾಡಿದ್ದಾರೆ. ಪಾರ್ಟಿ ಬಳಿಕ  ಇಬ್ಬರ ನಡುವೆ ಲವ್ ವಿಚಾರವಾಗಿ ಗಲಾಟೆಯಾಗಿ ಅರ್ಚನಾ, ಆದೇಶ್ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಗಲಾಟೆ ಬಳಿಕ ಯುವತಿ ನಾಲ್ಕನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
 
ಯುವತಿ ಅರ್ಚನಾ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಅರ್ಚನಾಳನ್ನು ಆದೇಶ್ ತಳ್ಳಿರುವ ಸಾಧ್ಯತೆ ಇರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರೀಯಕರ ಆದೇಶ್ ನನ್ನ ಕೋರಮಂಗಲ ಪೊಲೀಸರು ವಶಕ್ಕೆ ಪಡೆದು ತನಿಖೆ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಅರ್ಚನಾ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಬಂದು ದೂರು ಯಾವ ರೀತಿ ದಾಖಲು‌ ಮಾಡುತ್ತಾರೆ ಎಂಬ ಆಧಾರದ ಮೇಲೆ ಎಫ್ಐಆರ್ ದಾಖಲಿಸಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments