Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಏರಿಕೆ!

Webdunia
ಭಾನುವಾರ, 24 ಜುಲೈ 2022 (19:15 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದು, ಕೆಎಸ್ಪಿಸಿಬಿ ಅಧ್ಯಯನದಲ್ಲಿ  ಆಶ್ಚರ್ಯಕರ ಸಂಗತಿ ಬಯಲಾಗಿದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳಕ್ಕೆ ಸಾರಿಗೆ ವ್ಯವಸ್ಥೆ, ಸಿಟಿಯ ಟ್ರಾಫಿಕ್ ಜಾಮ್, ಟ್ರಾಫಿಕ್ ಸಿಗ್ನಲ್, ರಸ್ತೆ ಕಾಮಗಾರಿ ವಿಳಂಬವೇ ಕಾರಣವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಪ್ರಕರಣಗಳು ಹೆಚ್ಚಾಗಿದ್ದ ವೇಳೆ ವಾಯು ಮಾಲಿನ್ಯ ತಗ್ಗಿತ್ತು. ಆದರೆ ಇದೀಗ ಯಥಾಸ್ಥಿತಿ ಕೆಲಸಗಳು ಶುರುವಾಗಿರುವ ಹಿನ್ನೆಲೆ ವಾಯು ಮಾಲಿನ್ಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಾಯು ಮಾಲಿನ್ಯದ ಹೆಚ್ಚಳವಾಗುತ್ತಿರುವುದನ್ನು ಕಂಡು ಸದ್ಯ ಕೆಎಸ್ಪಿಸಿಬಿ ತಲೆಕಡೆಸಿಕೊಂಡಿದೆ. ಇನ್ನು ನಗರದ ಮಾಲಿನ್ಯಕ್ಕೆ ಸಾರಿಗೆ ವ್ಯವಸ್ಥೆಯೇ ಮೂಲ ಕಾರಣ. ಶೇಕಡಾ 63.5 ರಷ್ಟು ಮಾಲಿನ್ಯ ವಾಹನಗಳಿಂದ ಆಗುತ್ತಿದೆ. ಜೊತೆಗೆ ರಸ್ತೆ ಕಾಮಗಾರಿ, ಇಂಡಸ್ಟ್ರೀಸ್, ಹೋಟೆಲ್, ಟ್ರಾಫಿಕ್ ಸಿಗ್ನಲ್ನಿಂದ ಅಧಿಕ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನೆಲೆ ಸಾರಿಗೆ ಇಲಾಖೆ ಜತೆ ಚರ್ಚೆ ನಡೆಸಿ, ಎಲೆಕ್ಟ್ರಿಕಲ್ ಬಸ್ ಖರೀದಿಗೆ ಮನವಿ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments