Webdunia - Bharat's app for daily news and videos

Install App

ಚಿಲ್ಲರೆ ಕಳ್ಳನನ್ನು ಹಿಡಿಯಲು ವಿಮಾನ ಪ್ರಯಾಣ

geetha
ಭಾನುವಾರ, 11 ಫೆಬ್ರವರಿ 2024 (17:07 IST)
ಬೆಂಗಳೂರು : ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೇ, ಎಲ್ಲಾ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದ ಪಿಎಸ್‌ಐ ಅಂಬರೀಶ್‌ ಆರೋಪಿಯನ್ನು ಕರೆತರಲು ಮುಂಬೈಗೆ ವಿಮಾನದಲ್ಲಿ ತೆರಳಿರುವುದು ಸಹ ಪತ್ತೆಯಾಗಿದೆ. ಹತ್ತು ದಿನಗಳ ಕಾಲ ಕಳವು ಪ್ರಕರಣದ ಆರೋಪಿಯೊಬ್ಬನನ್ನು ಅಕ್ರಮವಾಗಿ ಪೊಲೀಸ್‌ ಠಾಣೆಯಲ್ಲಿರಿಸಿಕೊಂಡಿದ್ದ ಅಮೃತಹಳ್ಳಿ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಅಂಬರೀಶ್‌ ಗೆ ಮಾನವ ಹಕ್ಕುಗಳ ಆಯೋಗ ನೋಟಿಸ್‌ ಜಾರಿಗೊಳಿಸಿದೆ. ಡಿವೈಎಸ್‌ಪಿ ಸುಧೀರ್‌ ನೇತೃತ್ವದ ತಂಡ ಶನಿವಾರ ಬೆಳಗ್ಗೆ ಪೊಲೀಸ್‌ ಠಾಣೆಯ ಮೇಲೆ ದಾಳಿ ನಡೆಸಿದಾಗ ಪಿಎಸ್‌ಐ ಅಂಬರೀಶ್‌ ಕೃತ್ಯ ಬೆಳಕಿಗೆ ಬಂದಿತ್ತು. 

ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಡಿಸಿಪಿಗೆ ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಸೂಚಿಸಿದ್ದಾರೆ. ಈ ಹಿಂದೆ ಕೆ.ಆರ್‌. ಪುರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಶಾಸಕರಿಗೆ ಬೆಳ್ಳಿಗಧೆ ನೀಡಿ ವೇದಿಕೆಯ ಮೇಲೆ ಕುಣಿದಾಡಿದ್ದ ಅಂಬರೀಶ್‌ ವರ್ತನೆ ವ್ಯಾಪಕ ಟೀಕೆಗೆ ಒಳಗಾಗಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments