Webdunia - Bharat's app for daily news and videos

Install App

ಡಾಕ್ಟರ್‌ಗೂ ಟೋಪಿ ಹಾಕಿದ ಐಶ್ವರ್ಯ ಗೌಡ, ಬಗೆದಷ್ಟು ಹೊರಬರುತ್ತಿದೆ ಸುಂದರಿಯ ಕರಾಳ ಮುಖ

Sampriya
ಮಂಗಳವಾರ, 7 ಜನವರಿ 2025 (15:11 IST)
Photo Courtesy X
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚನೆ ಪ್ರಕರಣದ ಐಶ್ವರ್ಯಾ ಗೌಡ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.

ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಡಾ.ಮಂಜುಳಾ ಪಾಟೀಲ್ ಎಂಬುವವರು ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದಾರೆ.

ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ 2020-21ನೇ ಸಾಲಿನಲ್ಲಿ ಚಿಕಿತ್ಸೆಗಾಗಿ ಬರುತ್ತಿದ್ದಾಗ ಐಶ್ವರ್ಯಾ ಗೌಡ ಪರಿಚಯವಾಗಿತ್ತು. ತಾನು, ಡಿ.ಕೆ.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂದು ಪರಿಚಯಿಸಿಕೊಂಡಿದ್ದ ಐಶ್ವರ್ಯಾ ಗೌಡ, ತನಗೆ ದೊಡ್ಡಮಟ್ಟದಲ್ಲಿ ರಿಯಲ್ ಎಸ್ಟೇಟ್, ಗೋಲ್ಡ್ ಬ್ಯುಸಿನೆಸ್‌, ಕೆಸಿನೋ ವ್ಯವಹಾರ ಇರುವುದಾಗಿ ಅವರಲ್ಲಿ ನಂಬಿಸಿದ್ದರು.

2022ರಿಂದ 2024ರವೆಗೂ ಹೂಡಿಕೆ, ಮತ್ತಿತರ ಕಾರಣಗಳನ್ನು ನೀಡಿ ಹಂತಹಂತವಾಗಿ 2.52 ಕೋಟಿ ರೂ ಹಣ ಹಾಗೂ 2.50 ಕೋಟಿ ಮೌಲ್ಯದ ಒಟ್ಟು 2 ಕೆ‌.ಜಿ 350 ಗ್ರಾಂ ಚಿನ್ನಾಭರಣ ಪಡೆದಿದ್ದ ಐಶ್ವರ್ಯಾ ಗೌಡ ಹಿಂದಿರುಗಿಸದೇ ಸಬೂಬು ಹೇಳುತ್ತಿದ್ದಳು.

ಇನ್ನೂ ಐಶ್ವರ್ಯಾ ಗೌಡ ವಿರುದ್ಧ ಪ್ರಕರಣ ದಾಖಲಾಗಿರುವ ವಿಚಾರ ಮಂಜುಳಾ ಪಾಟೀಲ್ ಅವರ ಗಮನಕ್ಕೆ ಬಂದಿತ್ತು.

ಮಂಜುಳಾ ನೀಡಿದ ದೂರಿನಲ್ಲಿ ಐಶ್ವರ್ಯಾ ಗೌಡ, ''ನಿನಗೆ ಕೊಡಬೇಕಿರುವ ಹಣ, ಚಿನ್ನಾಭರಣದ ಕುರಿತು ಯಾರಿಗೂ ಹೇಳಬಾರದು, ದೂರು ನೀಡಬಾರದು. ಹಾಗೇನಾದರೂ ದೂರು ನೀಡಿದರೆ, ಸಾಕ್ಷಿ ಹೇಳಿಕೆ ನೀಡಿದರೆ ಕೊಡಬೇಕಿರುವ ಹಣ ಚಿನ್ನಾಭರಣ ಕೊಡುವುದಿಲ್ಲ. ನಾನು ಡಿ.ಕೆ‌.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂಬುದು ಗೊತ್ತಿದೆ ತಾನೆ?" ಎಂದು ಬೆದರಿಕೆ ಹಾಕಿರುವುದಾಗಿ ಮಂಜುಳಾ ಪಾಟೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments