Select Your Language

Notifications

webdunia
webdunia
webdunia
webdunia

ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಬದಲು ನಿಷ್ಠಾವಂತರನ್ನು ಪರಿಗಣಿಸಬೇಕು -ಅಜಯ್ ಸಿಂಗ್ ಒತ್ತಾಯ

ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಬದಲು ನಿಷ್ಠಾವಂತರನ್ನು ಪರಿಗಣಿಸಬೇಕು -ಅಜಯ್ ಸಿಂಗ್ ಒತ್ತಾಯ
ಬೆಂಗಳೂರು , ಮಂಗಳವಾರ, 28 ಮೇ 2019 (11:03 IST)
ಬೆಂಗಳೂರು : ಅತೃಪ್ತ ಶಾಸಕರ ಓಲೈಕೆಗಾಗಿ ದೋಸ್ತಿ ಸರ್ಕಾರದ ನಾಯಕರು ಕಸರತ್ತು ನಡೆಸಿದರೆ, ಜೀವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ.




ಅತೃಪ್ತ ಶಾಸಕರು ಪಕ್ಷ ಬಿಟ್ಟು ಹೋಗದಂತೆ ಮಾಡಲು ದೋಸ್ತಿ ನಾಯಕರು ಮಾಸ್ಟರ್ ಪ್ಲಾನ್ ಮಾಡಿದೆ, ಅದರಂತೆ ಅತೃಪ್ತರಿಗೆ ಸಚಿವ ಸ್ಥಾನ ನೀಡಿ ಪಕ್ಷದಲ್ಲೇ ಉಳಿಸಿಕೊಳ್ಳು ಪ್ರಯತ್ನದಲ್ಲಿದೆ. ಆದರೆ ಈ ಬಗ್ಗೆ ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ಡಾ.ಅಜಯ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಶಾಸಕ ಅಜಯ್ ಸಿಂಗ್, ಪಕ್ಷ ಬಿಟ್ಟು ಹೋಗಬೇಕೆಂದುಕೊಂಡಿದ್ದ ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಬದಲು ಪಕ್ಷಕ್ಕೆ ನಿಷ್ಠೆಯಿಂದ ಇರುವವರಿಗೆ ಸಚಿವ ಸ್ಥಾನ ನೀಡಿ, ನಿಷ್ಠಾವಂತರನ್ನು ಪರಿಗಣಿಸಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಒತ್ತಾಯ ಹೇರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಉಳಿಸಿಕೊಳ್ಳಲು ಕೈನಾಯಕರ ಕಸರತ್ತು