Webdunia - Bharat's app for daily news and videos

Install App

ಅಜೆಕಾರ್ ಬಾಲಕೃಷ್ಣ ಮರ್ಡರ್ ಕೇಸ್: ಪತ್ನಿ ಪ್ರತಿಮಾ ಮತ್ತೊಂದು ಖತರ್ನಾಕ್ ಪ್ಲ್ಯಾನ್ ರಿವೀಲ್

Krishnaveni K
ಬುಧವಾರ, 6 ನವೆಂಬರ್ 2024 (09:43 IST)
ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರ್ ಬಾಲಕೃಷ್ಣ ಮರ್ಡರ್ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಾಲಕೃಷ್ಣಗೆ ವಿಷ ಹಾಕಿದ್ದ ಪತ್ನಿ ಪ್ರಿತಮಾಳ ಮತ್ತೊಂದು ಖತರ್ನಾಕ್ ಕೃತ್ಯ ಬಯಲಾಗಿದೆ.

ಅಜೆಕಾರ್ ಬಾಲಕೃಷ್ಣ ಕೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಪತ್ನಿ ಪ್ರತಿಮಾ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆಂದು ಪ್ರಿಯಕರ ದಿಲೀಪ ಹೆಗ್ಡೆ ಜೊತೆ ಸೇರಿಕೊಂಡು ಹಲವು ಸಮಯದಿಂದ ಪತಿ ಬಾಲಕೃಷ್ಣಗೆ ವಿಷ ಪ್ರಾಶನ ಮಾಡಿಸುತ್ತಿದ್ದಳು. ಹಾಗಿದ್ದರೂ ಆತ ಹುಷಾರಾಗಿ ಬಂದನೆಂಬ ಸಿಟ್ಟಿನಲ್ಲಿ ಪ್ರಿಯಕರನ ಜೊತೆ ಸೇರಿಕೊಂಡು ಪತಿಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು.

ಈ ಪ್ರಕರಣದಲ್ಲಿ ಪ್ರತಿಮಾ ಸಹೋದರ ಸಂದೀಪ್ ಅವರೇ ತಂಗಿಯ  ವಿರುದ್ಧ ನಿಂತು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ತನಗೂ ಸಹೋದರಿ ಪ್ರತಿಮಾ ವಿಷ ಪ್ರಾಶನ ಮಾಡಿಸಿದ್ದಾಳೆ ಎಂದು ಸಂದೀಪ್ ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಿಂದ ತನಗೂ ಆರೋಗ್ಯ ಸಮಸ್ಯೆಯಾಗುತ್ತಿದೆ. ಕತ್ತು, ಕಾಲಿನ ಸ್ನಾಯು ಸೆಳೆತವಾಗಿದೆ.  ವಿಪರೀತ ತೂಕ ಕಳೆದುಕೊಂಡಿದ್ದೇನೆ. ಈಗ ನಾನೂ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುತ್ತೇನೆ. ಒಂದು ದಿನ ನಾನೂ ಆಕೆಯ ಮನೆಯಲ್ಲಿ ಊಟ ಮಾಡಿದ್ದೆ. ಹೀಗಾಗಿ ನನಗೂ ವಿಷ ಹಾಕಿರಬಹುದು ಎಂದು ಅನುಮಾನವಿದೆ. ಯಾಕೆಂದರೆ ಅವಳ ದಾರಿಗೆ ಅಡ್ಡವಾಗಿದ್ದು ನಾನೇ ಎಂದು ಹೇಳಿದ್ದಾರೆ.

ಈ ಮೂಲಕ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಈಗ ವಿಚಾರಣೆ ಹಂತದಲ್ಲಿ ಆರೋಪಿಗಳಾದ ಪ್ರತಿಮಾ ಮತ್ತು ದಿಲೀಪ್ ಹೆಗ್ಡೆ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ದಿಲೀಪ್ ಹೆಗ್ಡೆಯನ್ನು ರಕ್ಷಿಸಲು ಅವರ ಕುಟುಂಬದಿಂದ ಪ್ರಭಾವ ಬೀರಲಾಗುತ್ತಿದೆ ಎಂಬ ಆರೋಪವನ್ನೂ ಬಾಲಕೃಷ್ಣ ಕುಟುಂಬಸ್ಥರು ಮಾಡಿದ್ದಾರೆ. ಹೀಗಾಗಿ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments