ಅಜೆಕಾರ್ ಬಾಲಕೃಷ್ಣ ಹತ್ಯೆ ಕೇಸ್: ಪ್ರಿಯಕರ ದಿಲೀಪ್ ಹೆಗ್ಡೆ ಜೊತೆ ಸೇರಿ ಪ್ರತಿಮಾ ಮಾಡಿದ್ದ ಖತರ್ನಾಕ್ ಪ್ಲ್ಯಾನ್ ಬಹಿರಂಗ

Krishnaveni K
ಮಂಗಳವಾರ, 29 ಅಕ್ಟೋಬರ್ 2024 (13:32 IST)
ಕಾರ್ಕಳ: ಪತಿಗೆ ಸ್ಲೋ ಪಾಯಿಸನ್ ನೀಡಿ, ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಮಾಡಿದ ಖತರ್ನಾಕ್ ಪ್ಲ್ಯಾನ್ ಈಗ ಬಹಿರಂಗವಾಗಿದೆ.

ದಿಲೀಪ್ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಪ್ರತಿಮಾ ದಿನಾ ತನ್ನ ಪತಿಗೆ ವಿಷವುಣಿಸಿದ್ದರಿಂದ ಆತ ತೀವ್ರ ಅಸ್ವಸ್ಥನಾಗಿದ್ದ. ಕೊನೆಗೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಹೇಗೋ ಗುಣಮುಖರಾಗಿ ಮನೆಗೆ ಬಂದಿದ್ದ ಬಾಲಕೃಷ್ಣರನ್ನು ಪ್ರತಿಮಾ ಮತ್ತು ದಿಲೀಪ್ ಸೇರಿಕೊಂಡು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಇದೀಗ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ನವಂಬರ್ 7 ರವರೆಗೆ ಅವರ ನ್ಯಾಯಾಂಗ ಬಂಧನ ಅವಧಿಯಿದೆ. ಈ ನಡುವೆ ಬಾಲಕೃಷ್ಣಗೆ ಯಾವ ಪಾಯಿಸನ್ ನೀಡಲಾಗಿತ್ತು ಎಂಬ ವಿಚಾರವನ್ನು ದಿಲೀಪ್ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದ.

ಆರ್ಸೆನಿಕ್ ಎಂಬ ವಿಷವನ್ನು ಆಹಾರದಲ್ಲಿ ಬೆರೆಸಿ ಕೊಡಲಾಗುತ್ತಿತ್ತು ಎಂದು ತನಿಖೆಯಿಂದ ಗೊತ್ತಾಗಿದೆ. ಇದನ್ನು ಕಾರ್ಕಳದ ಲ್ಯಾಬ್ ನಿಂದ ದಿಲೀಪ್ ತಂದುಕೊಟ್ಟಿದ್ದ. ವಿಶೇಷವೆಂದರೆ ಇದಕ್ಕಾಗಿ ಆತ ಗೂಗಲ್ ನಲ್ಲಿ ಸಾಕಷ್ಟು ಸ್ಟಡಿ ಮಾಡಿದ್ದ ಎನ್ನಲಾಗಿದೆ. ಯಾವ ವಿಷ ನೀಡಿದರೆ ವ್ಯಕ್ತಿಗೆ ಸಾವಾಗುತ್ತದೆ ಎಂದು ತಿಳಿದುಕೊಂಡಿದ್ದ ಎನ್ನಲಾಗಿದೆ.

ಇದೀಗ ವಿಚಾರಣೆ ವೇಳೆ ಈ ಯೋಜನೆ ನಿನ್ನೆ ಮೊನ್ನೆಯದಲ್ಲ. ಜೂನ್ ನಲ್ಲೇ ದಿಲೀಪ್ ವಿಷ ಖರೀದಿ ಮಾಡಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಜೂನ್ ನಲ್ಲೇ ತನ್ನ ಲ್ಯಾಬ್ ಗೆ ಬೇಕಾಗುತ್ತದೆ ಎಂದು ಸುಳ್ಳು ಹೇಳಿ ಕಾರ್ಕಳದ ಲ್ಯಾಬ್ ನಿಂದ ದಿಲೀಪ್ ವಿಷ ಖರೀದಿ ಮಾಡಿದ್ದ. ಆದರೆ ಬಾಲಕೃಷ್ಣಗೆ ವಿಷ ನೀಡಲು ಶುರು ಮಾಡಿದ್ದು ಆಗಸ್ಟ್ ನಿಂದ ಎಂದು ತಿಳಿದುಬಂದಿದೆ. ಆದರರೆ ಇದೊಂದೇ ವಿಷ ಹಾಕಲಾಗಿದೆಯೇ ಅಥವಾ ಬೇರೆ ವಿಷಾಂಶವನ್ನು ಬೆರೆಸಲಾಗಿದೆಯೇ ಎಂದು ತನಿಖೆಯಿಂದ ತಿಳಿದುಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments