Webdunia - Bharat's app for daily news and videos

Install App

ಪಕ್ಷೇತರ ಅಭ್ಯರ್ಥಿಯಾಗಿ ಅಖಂಡ ಶ್ರೀನಿವಾಸ್ ಮೂರ್ತಿ ಕಣಕ್ಕೆ

Webdunia
ಸೋಮವಾರ, 17 ಏಪ್ರಿಲ್ 2023 (16:52 IST)
ಪುಲಕೇಶಿನಗರದ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ್ದಾರೆ. ನಿನ್ನೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಂಡ ಶ್ರೀನಿವಾಸ್ ಮೂರ್ತಿ ಅವರು, ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಸುದ್ದಿಗೋಷ್ಠಿಯನ್ನ ನಡೆಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದರು. 
 
ನನಗೆ ಟಿಕೆಟ್ ತಪ್ಪಿಸಿರುವುದು. ಅತಿ ಹೆಚ್ಚು ಮತ ಗಳಿಸಿ ಗೆದ್ದಿದ್ದ ನನಗೆ ಅವಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಜಮೀರ್ ಅಹಮದ್ ಮಾತ್ರ ನನಗೆ ಸಹಾಯ ಮಾಡಿದ್ದಾರೆ. ಹಾಗಾಗಿ ನಾನು ಅನಿವಾರ್ಯವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದರು.ನನಗೆ ಅಳು ಬರುವ ಪರಿಸ್ಥಿತಿ ಬಂದಿದೆ. ಬೇರೆ ಪಕ್ಷದಲ್ಲಿದ್ದವರನ್ನು ಕರೆದುಕೊಂಡು ಬಂದು ನಮಗೆ ನೋವು ಕೊಡುತ್ತಿದ್ದಾರೆ. ಯಾರೋ ಮೌಲಾನಾ ಹೇಳಿದರು ಎನ್ನುತ್ತಾರೆ. ಆದರೆ ಯಾವ ಮೌಲಾನಾ ಕೂಡ ನನ್ನ ವಿರುದ್ದ ಹೇಳಿಲ್ಲ. ಇಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಎಲ್ಲರೂ ಒಂದಾಗಿದ್ದೇವೆ ಎಂದರು. ಅಲ್ಲದೇ ಈ ಬಾರಿ ನನ್ನ ಗೆಲುವನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments