Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

Webdunia
ಸೋಮವಾರ, 17 ಏಪ್ರಿಲ್ 2023 (16:46 IST)
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ಭಾನುವಾರ ಶಿರಸಿಗೆ ತೆರಳಿದ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
 
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಮೂರು ಪಟ್ಟಿಯಲ್ಲಿಯೂ ನನಗೆ ಟಿಕೆಟ್ ನೀಡಿಲ್ಲ. ಸಾಕಷ್ಟು ನೋವು ತಿಂದಿದ್ದೇನೆ. ಇದರಿಂದ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಂದಿದ್ದೇನೆ ಎಂದು  ಹೇಳಿದರು.
 
ಪಕ್ಷ ನನಗೆ ಇದುವರೆಗೂ ಟಿಕಟ್ ನೀಡಿಲ್ಲ ಎಂದರೆ ಅರ್ಥ ಮಾಡಕೊಳ್ಳಬೇಕು. ಕ್ಷೇತ್ರದ ಜನ ದಿನವೂ ಏನಾಯ್ತು ಎಂದು ಪ್ರಶ್ನೆ ಮಾಡುತ್ತಾರೆ. ನನ್ನ ಕ್ಷೇತ್ರದಲ್ಲಿ ಹಿಂದೂ-ಮುಸ್ಲಿಂ-ಕಿಶ್ಚಿಯನ್ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಅದು ನಾನು ಹುಟ್ಟಿ ಬೆಳೆದ ಸ್ಥಳ. ನಾವೆಲ್ಲರೂ ಜೊತೆಗಿದ್ದೇವೆ. ಯಾರದೋ ಮಾತುಕೇಳಿ ನನಗೆ ಈ ರೀತಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
 
ಕೆಲವು ಹಿರಿಯ ನಾಯಕರು ನನಗೆ ಟಿಕೆಟ್ ನೀಡಬಾರದು ಎಂದು ತೀರ್ಮಾನ ಮಾಡಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ. ಯಾರದೋ ತಪ್ಪಿಗೆ ನನ್ನ ಮನೆ ಸುಟ್ಟುಕೊಂಡಿದ್ದೇನೆ. ನನಗೆ ಈ ರೀತಿ ನೋವು ಕೊಡಲಾಗುತ್ತದೆ. ನನ್ನ ಕ್ಷೇತ್ರದಲ್ಲಿ ಎಲ್ಲರೂ ಅಣ್ಣತಮ್ಮಂದರಂತೆ ಇದ್ದೇವೆ. ಆದರೆ, ಕ್ಷೇತ್ರದ ಹೊರಗಿನವರ ಹೇಳಿಕೆ ಪರಿಗಣಿಸಿ ನನಗೆ ಟಿಕೆಟ್ ನೀಡುತ್ತಿಲ್ಲ ಎಂದರು. 
 
ನಾನು ಬೇರೆ ಯಾವುದೇ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿಲ್ಲ. ಕ್ಷೇತ್ರದಲ್ಲಿ ನಮ್ಮ ಲೀಡರ್‌ಗಳ ಜೊತೆ ಚರ್ಚಿಸಿ ರಾಜೀನಾಮೆ ತೀರ್ಮಾನ ಮಾಡಿದ್ದೇನೆ. ಸದ್ಯ ಪಕ್ಷೇತರವಾಗಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಕ್ಷೇತದ ಮುಖಂಡರು ಕಾರ್ಯಕರ್ತರೊಂದಿಗೆ ಚರ್ಚಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments