Webdunia - Bharat's app for daily news and videos

Install App

ಅಖಿಲೇಶ್ ಯಾದವ್ ಪಾಲಾದ 'ಸೈಕಲ್‌' ಚಿಹ್ನೆ, ಮುಲಾಯಂ ಸಿಂಗ್‌ಗೆ ಮುಖಭಂಗ

Webdunia
ಸೋಮವಾರ, 16 ಜನವರಿ 2017 (18:59 IST)
ಸಮಾಜವಾದಿ ಪಕ್ಷದ ಹೆಸರು ಹಾಗೂ 'ಸೈಕಲ್' ಚಿಹ್ನೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪಾಲಾಗಿದ್ದು, ಮುಲಾಯಂ ಸಿಂಗ್ ಯಾದವ್‌ಗೆ ತೀವ್ರ ಮುಖಭಂಗವಾಗಿದೆ. 
ಸಮಾಜವಾದಿ ಪಕ್ಷದ ಚಿಹ್ನೆ ಸೈಕಲ್‌ನ್ನು ಯಾರಿಗೆ ನೀಡಬೇಕೆಂಬುದಕ್ಕೆ ಸಂಬಂಧಿಸಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. 
 
ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಕೌಟುಂಬಿಕ  ಕಲಹ ಪಕ್ಷವನ್ನೇ ಒಡೆಯಲು ಕಾರಣವಾಗಿದೆ. ಎರಡು ಬಣದವರು ಪಕ್ಷದ ಚಿಹ್ನೆ 'ಸೈಕಲ್'ನ್ನು ತಮ್ಮದಾಗಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಚುನಾವಣಾ ಆಯೋಗದ ಮೆಟ್ಟಿಲೇರಿದ್ದರು.
 
ಈ ಕುರಿತು ಚುನಾವಣಾ ಆಯೋಗ ಕಳೆದ ವಾರ ವಿಚಾರಣೆ ನಡೆಸಿತ್ತು. ಸುಮಾರು 4ಗಂಟೆಗಿಂತಲೂ ಹೆಚ್ಚು ಕಾಲ ಎರಡು ಕಡೆಯವರ ವಾದ ಪ್ರತಿವಾದ ಆಲಿಸಿ, ದಾಖಲೆಗಳನ್ನು ಪರಿಶೀಲಿಸಿದ್ದು, ಚಿಹ್ನೆ ಯಾರಿಗೆ ಸೇರಬೇಕು ಎಂಬ ನಿರ್ಧಾರವನ್ನು ಕಾಯ್ದಿರಿಸಿತ್ತು.
 
ಈ ಕುರಿತಂತೆ ಇಂದು ಆಯೋಗ ನಿರ್ಣಯ ಪ್ರಕಟಿಸುವ ಸಾಧ್ಯತೆಗಳಿದ್ದು ಎಲ್ಲರ ಚಿತ್ತ ನವದೆಹಲಿಯತ್ತ ನೆಟ್ಟಿದೆ. ಆಯೋಗ ಚಿಹ್ನೆಯನ್ನು ಯಾವುದಾದರೂ ಒಂದು ಬಣಕ್ಕೆ ನೀಡಬಹುದು ಅಥವಾ ಎರಡು ಬಣದವರಿಗೆ ಸೈಕಲ್ ಬಿಟ್ಟು ಪ್ರತ್ಯೇಕ ಚಿಹ್ನೆ ನೀಡುವ ಸಾಧ್ಯತೆಗಳನ್ನು ಸಹ ಅಲ್ಲಗಳೆಯಲಾಗದು.  
 
ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಫೆಬ್ರವರಿ 11ರಿಂದ ಪ್ರಾರಂಭವಾಗಿ ಮಾರ್ಚ್ 8 ರಂದು ಮುಕ್ತಾಯಗೊಳ್ಳಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments