ಆಕ್ರೋಶ್ ದಿವಸ್‌ಕ್ಕೆ ಬಂದೋರಿಗೆ ಹಳೆಯ ನೋಟು ಹಂಚಿದ ಕಾಂಗ್ರೆಸ್ ಮುಖಂಡರು

Webdunia
ಸೋಮವಾರ, 28 ನವೆಂಬರ್ 2016 (15:43 IST)
ಅಕ್ರೋಶ್ ದಿವಸ್‌ ಪ್ರತಿಭಟನೆಗೆ ಬಂದೋರಿಗೆ ಶಾಸಕರ ಎದುರೆ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚಿದ ಘಟನೆ ಕೋಲಾರದಲ್ಲಿ ವರದಿಯಾಗಿದೆ.
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ 500, 1000 ಮುಖಬೆಲೆಯ ನೋಟು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ನಿರ್ಧಾರವನ್ನು ವಿರೋಧಿಸಿ ಇಂದು ಪ್ರತಿಪಕ್ಷಗಳ ಆಕ್ರೋಶ್ ದಿವಸ್‌ದ ಹೆಸರಲ್ಲಿ ಭಾರತ ಬಂದ್‌ಗೆ ಕರೆ ನೀಡಿದ್ದವು. ಆದರೆ, ಕೋಲಾರದಲ್ಲಿ ನಡೆದ ಆಕ್ರೋಶ್ ದಿವಸ್‌ದ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಶಾಸಕರ ಎದುರಿಗೆ ಹಳೆಯ 500 ಹಾಗೂ 1000 ರೂಪಾಯಿ ನೋಟುಗಳನ್ನು ಹಂಚಿರುವುದು ಬೆಳಕಿಗೆ ಬಂದಿದೆ.
 
ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕರ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಬಂದೋರಿಗೆ ಹಳೆಯ ನೋಟುಗಳನ್ನು ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
 
ಪ್ರತಿಭಟನೆಯಲ್ಲಿ ಭಾಗಿಯಾದವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಳೆಯ ನೋಟುಗಳನ್ನು ಹಂಚಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಣ ನೀಡಿ ಪ್ರತಿಭಟನೆಗೆ ಜನರನ್ನು ಕರೆತಂದರಾ? ಅಥವಾ ತಮ್ಮಲ್ಲಿರುವ ಕಪ್ಪು ಹಣವನ್ನೇ ಹಂಚಿಕೆ ಮಾಡಿದ್ರಾ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಹೋಗೋ ಅತ್ಲಾಗೆ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಮುಂದಿನ ಸುದ್ದಿ
Show comments