Select Your Language

Notifications

webdunia
webdunia
webdunia
webdunia

ಆಳಂದ ಕೆಜಿಪಿ ಶಾಸಕ ಬಿ.ಆರ್.ಪಾಟೀಲ್ ಕಾಂಗ್ರೆಸ್‌ಗೆ ಸೇರ್ಪಡೆ

ಆಳಂದ ಕೆಜಿಪಿ ಶಾಸಕ ಬಿ.ಆರ್.ಪಾಟೀಲ್ ಕಾಂಗ್ರೆಸ್‌ಗೆ ಸೇರ್ಪಡೆ
ಬೆಂಗಳೂರು , ಬುಧವಾರ, 14 ಜೂನ್ 2017 (13:47 IST)
ಅಳಂದ ವಿಧಾನಸಭಾ ಕ್ಷೇತ್ರದ ಕೆಜಿಪಿ ಶಾಸಕ ಬಿ.ಆರ್.ಪಾಟೀಲ್, ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ತೊರೆದು ಕೆಜಿಪಿ ಪಕ್ಷ ಸ್ಥಾಪಿಸಿದ್ದಾಗ ಬಿ.ಆರ್. ಪಾಟೀಲ್ ಕೂಡಾ ಕೆಜಿಪಿ ಪಕ್ಷಕ್ಕೆ ಜಿಗಿದಿದ್ದರು. ತದನಂತರ ಯಡಿಯೂರಪ್ಪ ಕೆಜಿಪಿಯಿಂದ ಮತ್ತೆ ಬಿಜೆಪಿಗೆ ಬಂದಿದ್ದರಿಂದ ಯಾವ ಪಕ್ಷ ಸೇರಬೇಕು ಎನ್ನುವ ಚಿಂತನೆಯಲ್ಲಿದ್ದರು ಎನ್ನಲಾಗಿದೆ.
 
ಇದೀಗ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವ ಬಿ.ಆರ್.ಪಾಟೀಲ್, ಇಂದು ಸಂಜೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯರ ಪಾರದರ್ಶಕ ಅಡಳಿತವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಯಸಿದ್ದೇನೆ ಎಂದು ಬಿ.ಆರ್.ಪಾಟೀಲ್ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಡಿಎಂಕೆ ಪ್ರತಿಭಟನೆ