Webdunia - Bharat's app for daily news and videos

Install App

3 ವರ್ಷದ ಮಗುವಿಗೆ ಮದ್ಯ ಕುಡಿಸಿ ವಿಕೃತಿ

Webdunia
ಬುಧವಾರ, 19 ಜನವರಿ 2022 (18:42 IST)
ಮಗುವಿಗೆ ಮದ್ಯ ಕುಡಿಸಿ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆಂಬ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಸವೇಶ್ವರನಗರ ಠಾಣೆ ಇನ್ಸ್‍ಪೆಕ್ಟರ್ ಐದು ಮಂದಿಗೆ ನೋಟಿಸ್ ನೀಡಿದ್ದಾರೆ.
ಸಂತ್ರಸ್ಥೆ ಪತಿ ಸುನೀಲ್‍ಕುಮಾರ್, ಅತ್ತೆ ಮಲ್ಲಿಗಾ, ಮಾವ ಪಳನಿ, ಭಾವ ಶಾಂತಕುಮಾರ್ ಹಾಗೂ ಈತನ ಪತ್ನಿ ಸರಿತಾ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು , ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
 
ಈ ಕುಟುಂಬದ ಸದಸ್ಯರು ಮದ್ಯದ ಚಟ ಹೊಂದಿದ್ದು , ಮನೆಯಲ್ಲಿಯೇ ಒಟ್ಟಾಗಿ ಮದ್ಯಪಾನ ಮಾಡುತ್ತಿದ್ದರು. ಶಾಂತಕುಮಾರ್-ಸರಿತಾ ದಂಪತಿಗೆ ಮಕ್ಕಳಿರಲಿಲ್ಲ. ಈ ನಡುವೆ ಸುನೀಲ್‍ಕುಮಾರ್ ಅತ್ತಿಗೆ ಸರಿತಾ ಜೊತೆ ಸಂಬಂಧವಿಟ್ಟುಕೊಂಡ ಬಗ್ಗೆ ಸಂತ್ರಸ್ಥೆ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದರು.
 
ಸುನೀಲ್‍ಗೆ ಸಂತ್ರಸ್ಥೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಅವರೊಂದಿಗೂ ಜಗಳವಾಡಿಕೊಂಡು ಬಂದಿದ್ದ. ಈತನ ಅಪ್ಪ-ಅಮ್ಮ ಸಹ ಅದಕ್ಕೆ ಸಹಕರಿಸುತ್ತಿದ್ದರು ಎನ್ನಲಾಗಿದೆ.
 
ಮನೆಯಲ್ಲಿ ಒಟ್ಟಾಗಿ ಈ ಕುಟುಂಬದ ಸದಸ್ಯರು ಮದ್ಯ ಸೇವಿಸುವ ವೇಳೆ ಸಂತ್ರಸ್ಥೆಯ ಮೂರು ವರ್ಷದ ಮಗುವಿಗೆ ಮದ್ಯ ಕುಡಿಸಿ ವಿಕೃತಿ ಮೆರೆದಿರುವುದಲ್ಲದೆ ಸಂತ್ರಸ್ಥೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಬಸವೇಶ್ವರನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಐದು ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments