Webdunia - Bharat's app for daily news and videos

Install App

ಜೀವಂತ ಹೃದಯ ಬೆಂಗಳೂರಿನಿಂದ ಚೆನ್ನೈಗೆ ರವಾನೆ

Webdunia
ಶುಕ್ರವಾರ, 19 ಡಿಸೆಂಬರ್ 2014 (13:05 IST)
ಎರಡೂವರೆ ವರ್ಷದ ಪುಟ್ಟ ಕಂದಮ್ಮನ ಹೃದಯ ಶಸ್ತ್ರ ಚಿಕಿತ್ಸೆಗಾಗಿ 8 ತಿಂಗಳ ಮಗುವಿನ ಹೃದಯವು ನಗರದ ಹೆಚ್‌ಎಎಲ್ ವಿಮಾನದಿಂದ ಚೆನ್ನೈನ ಪೋರ್ಟಿಸ್ ಆಸ್ಪತ್ರೆಗೆ ಶೀಘ್ರವೇ ರವಾನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. 
 
ಚೆನ್ನೈ ಮೂಲದ ಎರಡೂವರೆ ವರ್ಷದ ಮಗುವೊಂದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಚೆನ್ನೈನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆ ಪುಟ್ಟ ಮಗುವಿನ ಶಸ್ತ್ರ ಚಿಕಿತ್ಸೆಯ ಯಶಸ್ವಿಗಾಗಿ ರಾಜ್ಯದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಶತಾಯ ಗತಾಯ ಶ್ರಮಿಸುತ್ತಿದ್ದಾರೆ. 
 
 ಬೆಂಗಳೂರು ಮೂಲದ 8 ತಿಂಗಳ ಮಗು ಮೆದುಳು ಸಂಬಂಧಿ ಕಾಯಿಲೆಗೆ ಒಳಗಾಗಿತ್ತು. ಆದರೆ ಮೆದುಳು ಪ್ರಸ್ತುತ ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈ ಪುಟ್ಟ ಕಂದಮ್ಮನ ಹೃದಯವನ್ನು ಅತ್ಯಾಧುನಿಕ ಚಿಕಿತ್ಸೆಯ ಮೂಲಕ ಜೀವಂತವಾಗಿ ಹೊರ ತೆಗೆದಿರುವ ವೈದ್ಯರು ಚೆನ್ನೈನ ಪೋರ್ಟಿಸ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಎರಡೂವರೆ ವರ್ಷದ ಮಗುವಿನ ಉಳಿವಿಗಾಗಿ ರವಾನಿಸಲಾಗುತ್ತಿದ್ದು, ಇಂದು ನಡೆಯುವ ಶಸ್ತ್ರ ಚಿಕಿತ್ಸೆಯಲ್ಲಿ ಅಳವಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
 
ಈ ಹಿನ್ನೆಲೆಯಲ್ಲಿ ಇಲ್ಲಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಜೀವಂತವಿರುವ ಪುಟ್ಟ ಹೃದಯವನ್ನು ಹೊತ್ತು ವಿಶೇಷ ವಿಮಾನವೊಂದು ಶೀಘ್ರವೇ ಚೆನ್ನೈಗೆ ಪ್ರಯಾಣ ಬೆಳೆಸಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದು ಮಣಿಪಾಲ್ ಸಮೂಹ ಸಂಸ್ಥೆ ವೈದ್ಯರ ಎರಡನೇ ಸಾಹಸ ಪ್ರಯತ್ನವಾಗಿದ್ದು, ಮೊದಲ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದರು.    

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments