Webdunia - Bharat's app for daily news and videos

Install App

ಫೆ. 5, 6 , 7 ರಂದು ಅಖಿಲ ಭಾರತ 85 ನೇ ಕನ್ನಡ ಸಾಹಿತ್ಯ ಸಮ್ಮೇಳನ

Webdunia
ಬುಧವಾರ, 13 ನವೆಂಬರ್ 2019 (15:31 IST)
ಅಖಿಲ ಭಾರತ  85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020 ರ ಫೆಬ್ರವರಿ 5, 6, ಮತ್ತು 7 ರಂದು ನಡೆಸಲಾಗುತ್ತಿದೆ.

ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಧಾನ ಕ್ರೀಡಾಂಗಣದಲ್ಲಿ ಸಮ್ಮೇಳನ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ  ಘೋಷಿಸಿದ್ರು.

ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚಿಸಿದಾಗ ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ವಿಶ್ವವಿದ್ಯಾಲಯದ ಮಕ್ಕಳ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಪರಿಶೀಲಿಸಿ ಸ್ಥಳ ಹಾಗೂ ದಿನಾಂಕ ನಿಗದಿಪಡಿಸಲು ತಿಳಿಸಿದ್ದಾರೆ. 2020 ರ ಫೆಬ್ರವರಿ ಮೊದಲನೇ ವಾರದಲ್ಲಿ ಈ ಸಮ್ಮೇಳನವನ್ನು ಏರ್ಪಡಿಸಲಾಗುವುದು ಎಂದ್ರು.

ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಧಾನ ಕ್ರೀಡಾಂಗಣದಲ್ಲಿ ಪ್ರಧಾನ ವೇದಿಕೆ ನಿರ್ಮಿಸಲಾಗುವುದು. ಇಲ್ಲಿ 50-60 ಸಾವಿರ ಜನರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು.  ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ  ಕಾರ್ಯಸೌಧದ ಮಹತ್ಮಾಗಾಂಧಿ  ಸಭಾಂಗಣಗಳಲ್ಲಿ ಗೋಷ್ಠಿಗಳನ್ನು ಏರ್ಪಡಿಸಲಾಗುವುದು. ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಮೂರು ದಿನಗಳ ಕಾಲ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಅಖಿಲ ಭಾರತ  85ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಅಂದಾಜು 10 ರಿಂದ 12 ಕೋಟಿ ರೂ. ವೆಚ್ಚವಾಗಲಿದ್ದು, ಈ ಎಲ್ಲಾ ಅನುದಾನವು ಸರ್ಕಾರ ಭರಿಸಲಿದೆ ಎಂದರು. ಸಮ್ಮೇಳನ ಅಧ್ಯಕ್ಷರ ಆಯ್ಕೆಯನ್ನು ಮುಂದಿನ ದಿನಗಳಲ್ಲಿ ಕಾರ್ಯಕಾರಿ ಸಮಿತಿ ಸಭೆ ಕರೆದು   ಅಧ್ಯಕ್ಷರ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments