ಕೀವ್‌ ನಲ್ಲಿದ್ದ ಎಲ್ಲಾ ಭಾರತೀಯರು ತಾಯ್ನಾಡಿಗೆ ವಾಪಾಸ್

Webdunia
ಬುಧವಾರ, 2 ಮಾರ್ಚ್ 2022 (20:53 IST)
ಯುದ್ಧಪೀಡಿತ ಪ್ರದೇಶ ಉಕ್ರೇನ್ ನಲ್ಲಿಉ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಭಾರತದ 9ನೇ ವಿಮಾನ 218 ಜನರನ್ನು ಹೊತ್ತು ಬುಕಾರೆಸ್ಟ್ ನಿಂದ ದೆಹಲಿಗೆ ಬಂದಿಳಿದಿದೆ.
ಕಳೆದ 24 ಗಂಟೆಗಳ್ಲಿ 1,377 ನಾಗರೀಕರನ್ನು ಭಾರತ ಸೋಳಾಂತರಿಸಿದ್ದುಮ ಪೊಲ್ಯಾಂಡ್ ನಿಂದ ಮೊದಲ ವಿಮಾನ ಸೇರಿ ಒಟ್ಟು 6 ವಿಮಾನಗಳು ಭಾರತೀಯರನ್ನು ಹೊತ್ತು ಪ್ರಯಾಣ ನಡೆಸುತ್ತಿವೆ. ʼ
ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ಮುಂದಿನ ಮೂರು ದಿನಗಳಲ್ಲಿ 26ಕ್ಕೂ ಹೆಚ್ಚು ವಿಮಾನಗಳು ಕಾರ್ಯಾಚರಣೆ ನಡೆಸಲಿವೆ. ಉಕ್ರೇನ್ ವಾಯುಪ್ರದೇಶ ಮುಚ್ಚಿರುವುದರಿಂದ ರೊಮೇನಿಯಾ, ಹಂಗೇರಿ, ಪೊಲ್ಯಾಂಡ್, ಸ್ಲೋವ್ಯಾಕ್ ರಿಪಬ್ಲಿಂಗ್ ಮೂಲಕ ಭಾರತೀಯರನ್ನು ತಾಯ್ನಾಡಿಗೆ ವಾಪಾಸ್ ಕರೆತರಲಾಗುತ್ತಿದೆ.
ಈ ಮೂಲಕ ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಯಾವುದೇ ಭಾರತೀಯ ಉಳಿದಿಲ್ಲ. ಎಲ್ಲರನ್ನು ಸ್ಥಳಾಂತರ ಮಾಡಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ತಿಳಿಸಿದ್ದಾರೆ.
ಉಕ್ರೇನ್ ನಲ್ಲಿದ್ದ ಸುಮಾರು 20 ಸಾವಿರ ಭಾರತೀಯರಲ್ಲಿ ಈಗಾಗಲೇ 12 ಸಾವಿರ ಭಾರತೀಯರು ಉಕ್ರೇನ್ ತೊರೆದಿದ್ದಾರೆ. ಅಂದರೆ ಇದು ಒಟ್ಟು ಸಂಖ್ಯೆಯ ಶೇ.60ರಷ್ಟು. ಉಳಿದ ಶೇ.40ರಷ್ಟು ಮಂದಿ ಖಾರ್ಕೀವ್, ಸುಮಿಗಳಲ್ಲಿ ಇದ್ದಾರೆ.
ಈಗಾಗಲೇ ನಿಯೋಜನೆಗೊಂಡಿರುವ 46 ವಿಮಾನಗಳ ಪೈಕಿ 29 ರೊಮೇನಿಯಾದ ಬುಚರೆಸ್ಟ್, 10 ಹಂಗೇರಿಯ ಬುಡಪೆಸ್ಟ್, 6 ಪೊಲ್ಯಾಂಡ್ ಹಾಗೂ 1 ಸ್ಲೋವೇಕಿಯಾದಿಂದ ಹಾರಾಟ ನಡೆಸಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ, ಸಾಹಸಸಿಂಹ ಸಿನಿಮಾದ ಡೈರೆಕ್ಟರ್‌ ಜೊ ಸೈಮನ್ ಇನ್ನಿಲ್ಲ

ಕಾಲೇಜಿನಲ್ಲಿ ಪ್ರೇಮಿಗಳ ದಿನಾಚರಣೆ, ಸ್ಥಳಕ್ಕೆ ಬಂದ ಬಜರಂಗದಳದ ಕಾರ್ಯಕರ್ತರು ಮಾಡಿದ್ದೇನು

ರೌಡಿಶೀಟರ್‌ ಕೊಲೆ ಪ್ರಕರಣ, ಒಂದು ದಿನದ ಮಟ್ಟಿಗೆ ಬೈರತಿ ಬಸವರಾಜ್‌ಗೆ ರಿಲೀಫ್‌ ಸಿಕ್ಕಿದ್ದೇಗೆ

ಕರೂರ್ ದುರಂತದ ಬಳಿಕ ವಿಜಯ್ ರ್ಯಾಲಿಯಲ್ಲಿ ಇಂದು ಮತ್ತೊಂದು ಸಾವು

ವಿರೋಧ ಪಕ್ಷದ ವೈಫಲ್ಯ ಆಡಳಿತ ಪಕ್ಷಕ್ಕೆ ಸಿಕ್ಕಿದೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments