Select Your Language

Notifications

webdunia
webdunia
webdunia
Sunday, 13 April 2025
webdunia

ಬಿಜೆಪಿ ಬಿಟ್ಟು ಯಾರು ಬೇರೆ ಪಕ್ಷ ಹೋಗಲ - ಬಿ.ಎಸ್. ವೈ.

Crime
ಬೆಂಗಳೂರು , ಭಾನುವಾರ, 13 ಮಾರ್ಚ್ 2022 (17:41 IST)
ಬಿಜೆಪಿಯಿಂದ ಯಾರೂ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮೊದಲೂ ಇರಲಿಲ್ಲ. ಈಗಲೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
 
ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ನಿಖರವಾಗಿ ಹೇಳಬಹುದು.
ಮಾರ್ಚ್ 30 ಹಾಗೂ 31 ರಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಪ್ರವಾಸದ ಕುರಿತು ಹಾಗೂ ಎಲ್ಲ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
 
ಅವಧಿ ಪೂರ್ವ ಚುನಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದ ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ಕುರಿತು ವರಿಷ್ಠರಿಂದ ಸೂಚನೆ ಬಂದ ಕೂಡಲೇ ದೆಹಲಿಗೆ ತೆರಳುವುದಾಗಿ ಹೇಳಿದರು.
 
ಉಕ್ರೇನ್ ನಲ್ಲಿ ಬಾಂಬ್ ದಾಳಿ ನಿಂತ ಕೂಡಲೇ ನವೀನ್ ಮೃತದೇಹ ತರುವ ಬಗ್ಗೆ ಪ್ರಕ್ರಿಯೆಗೆ ಪುನಃ ಚಾಲನೆ ನೀಡಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಎನ್. ಸಿ. ಬಿ. ದಾಳಿ ಅಪಾರ ಮಾದಕ ವಸ್ತು ಪತ್ತೆ