ಭಾರತ್ ಬಂದ್ ಯಶಸ್ಸಿಗೆ ಎಲ್ಲಾ ಸಂಘಟನೆಗಳ ಬೆಂಬಲ ವ್ಯಕ್ತ

Webdunia
ಶನಿವಾರ, 25 ಸೆಪ್ಟಂಬರ್ 2021 (22:27 IST)
ಬೆಂಗಳೂರು ಕೇಂದ್ರದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 27ರಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟಣೆಗಳು ಕರ್ನಾಟಕ ಬಂದ್ ನಡೆಸಲು ಮುಂದಾಗಿದ್ದು ಬಂದ ಯಶಸ್ಸಿಗೆ ಎಲ್ಲಾ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಕಳೆದ ಹತ್ತು ತಿಂಗಳಿನಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಯಾರದೇ ಕ್ರಮ ಕೈಗೊಂಡಿಲ್ಲ, ದೇಶದ ರೈತ ಸಮುದಾಯ ಭಾರತ್ ಬಂದ್ ಮಾಡುವ ಮೂಲಕ ಮತ್ತೊಂದು ಹೋರಾಟ ನಡೆಸುತ್ತಿದೆ. ರೈತ ಸಂಘದ ಮುಖಂಡ  ನಾಗೇಂದ್ರ ಮನವಿ ಮಾಡಿದ್ದಾರೆ.
 
ಕಾರ್ಮಿಕ , ದಲಿತ, ಮಹಿಳ, ವಿದ್ಯಾರ್ಥಿ ಸಂಘಟನೆಗಳು,ವಿವಿಧ ವಿವಿಧ ಕನ್ನಡಪರ ಸಂಘಟನೆಗಳು ಸೇರಿದಂತೆ ನೂರಾರು ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಳಿದ್ದಾರೆ ಎಂದು ಹೇಳಿದ್ದಾರೆ.
 
ನೈತಿಕ ಬೆಂಬಲ: 
 
ಹೋಟೆಲ್ ಮಾಲೀಕರು, ಖಾಸಗಿ ಬಸ್ ಚಾಲಕರು, ಮಾಲ್ ಗಳು, ಚಿತ್ರ ಮಂದಿರಗಳು, ಖಾಸಗಿ ಶಾಲೆಗಳ ಸಂಘಟನೆಗಳು,ಆಟೋ ಕ್ಯಾಬ್ ಚಾಲಕರು  ಬಂದ್‌ಗೆ ನೈತಿಕ ಬೆಂಬಲ ಘೋಷಿಸಿವೆ. ಕೋವಿಡ್  ಸಂಕಷ್ಟದಿಂದ ಈಗಾಗಲೇ ಸಾಕಷ್ಟು ನಷ್ಟ ಅನುಭವಿಸಿದ್ದೇವೆ. ಹಾಗಾಗಿ ಬಂದ್‌ನಲ್ಲಿ ಪಾಲ್ಗೊಳ್ಳದೆ ನೈತಿಕ ಬೆಂಬಲ ಸೂಚಿಸುವುದಾಗಿ ವರ್ತಕರ ಈಗಾಗಲೇ ತಿಳಿಸಿದ್ದಾರೆ.
 
ಕೋಡಿಹಳ್ಳಿ ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮನವಿ: 
 
ಬಂದ್ ಯಶಸ್ವಿ ಗೊಳಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕೂಡ ಹೇಳಿದ್ದಾರೆ.
 
ಬೈಟ್ಸ್: ಬಡಗಲಪುರ ನಾಗೇಂದ್ರ, ಅದರ್ಶ ಅಟೋ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್, ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ ಸಿ ರಾವ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments