ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ : ಶಿವಕುಮಾರ್

Webdunia
ಸೋಮವಾರ, 21 ಆಗಸ್ಟ್ 2023 (13:57 IST)
ಬೆಂಗಳೂರು : ಮಹದಾಯಿ, ಕಾವೇರಿ ನೀರು ವಿಚಾರವಾಗಿ ಇದೇ ಆಗಸ್ಟ್ 23 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಎಲ್ಲ ಸಂಸದರನ್ನ ಆಹ್ವಾನಿಸಲಾಗಿದೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಆ.21ರಂದು ಮಾಜಿ ಕಾರ್ಪೊರೇಟರ್ಸ್ ಸೇರಿದಂತೆ ಹಲವರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೂ ಅರ್ಜಿ ಹಾಕಿಲ್ಲ, ಮುಂದೆ ಕಾದು ನೋಡಬೇಕು. ಅವರವರ ಬದುಕು ಭವಿಷ್ಯ ನೋಡಿಕೊಳ್ತಾರೆ. ಸಿಟಿ ರವಿ ಹಿರಿಯರಿದ್ದಾರೆ, ಅವರು ಬೆದರಿಕೆಯೊಡ್ಡುತ್ತಿದ್ದಾರೆ,

ಕೈಕತ್ತರಿಸಿಬಿಡ್ತೀವಿ ಅಂತಾ? ಜೆಡಿಎಸ್, ಕಾಂಗ್ರೆಸ್ ಶಾಸಕರನ್ನ ಕರ್ಕೊಂಡು ಮಜಾ ಮಾಡಿದ್ರಲ್ಲ ಆವಾಗ ಏನಾಗಿತ್ತು? ಅವರ ರಾಜಕಾರಣ ಅವರು ಮಾಡಲಿ, ನಿಮಗೆ ಬರೋ ಬೆದರಿಕೆ ತರ, ಬೇರೆಯವರಿಗೂ ಬರುತ್ತೆ. ನಾವು ಯಾರನ್ನೂ ಕರೀತಿಲ್ಲ. ನಮಗಿರೋ ನಂಬರ್ಗೆ ಯಾರೂ ಅವಶ್ಯಕತೆ ಇಲ್ಲ. ಆದ್ರೆ ಪಕ್ಷಕ್ಕೆ ಬರೋರನ್ನ ನಾನು ತಡೆಯೋಕೆ ಆಗುತ್ತಾ? ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗುತ್ತಾ? ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments