Webdunia - Bharat's app for daily news and videos

Install App

ಎಲ್ಲಾ ಖಾಸಗಿ ಆಸ್ಪತ್ರೆಗಳು ಡಿ-ಅಡಿಕ್ಷನ್ ಕೇಂದ್ರ ತೆರೆಯಲಿ

Webdunia
ಗುರುವಾರ, 28 ಅಕ್ಟೋಬರ್ 2021 (22:18 IST)
ಡ್ರಗ್ಸ್‌ ಸೇವನೆ ವ್ಯಸನಿಗಳಾಗಿರುವ ಯುವಕರನ್ನು ಹೊರತರಲು ಎಲ್ಲಾ ಖಾಸಗಿ ಆಸ್ಪತ್ರೆಗಳು ಪ್ರತ್ಯೇಕ ಡಿ-ಅಡಿಕ್ಷನ್ ಕೇಂದ್ರವನ್ನು ತೆರೆಯಬೇಕು ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.
ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಮೊದಲ ವ್ಯಸನ ಮುಕ್ತ ಕೇಂದ್ರ ತೆರೆಯಲಾಗಿದ್ದು, ಅದರ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ ಕಾರ್ಯಕ್ರಮಗಳನ್ನು ಎಲ್ಲೆಡೆ ಮಾಡುವುದರಿಂದ ಈಗಾಗಲೇ ಮಾದಕ ವಸ್ತುಗಳಿಗೆ ವ್ಯಸನಿಗಳಾಗಿರುವವರನ್ನು ಹೊರತರಬಹುದು. ವಿದೇಶಗಳಿಗೆ ಹೋಲಿಸಿದರೆ ನಮ್ಮ‌ ದೇಶದಲ್ಲಿ ಡಿ-ಅಡಿಕ್ಷನ್ ಕಾರ್ಯಕ್ರಮಗಳು ಅತ್ಯಂತ ಕಡಿಮೆ. ಹೀಗಾಗಿ ವ್ಯಸನಿಗಳು ಅದರಿಂದ ಹೊರಬರಲಾಗದೇ ಕಷ್ಟ ಪಡುತ್ತಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಡ್ರಗ್‌ ಮಾರಾಟದ ದೊಡ್ಡ ಜಾಲ ಸದ್ದಿಲ್ಲದೇ ಹರಡುತ್ತಿದ್ದು, ಅದರ ಬೇರನ್ನು ಬುಡ ಸಮೇತ ಕಿತ್ತು ಹಾಕುವ ಪ್ರಯತ್ನವನ್ನು ನಮ್ಮ ಇಲಾಖೆ ಮಾಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯಿಂದ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಸುಲಭವಾಗಿ ತಲುಪುತ್ತಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದಲ್ಲಿಯೇ 450 ಕ್ಕೂ ಹೆಚ್ಚು ಡ್ರಗ್ ಸೇವಿಸುವವರನ್ನು ಪತ್ತೆ ಹಚ್ಚಿ, ದೂರು ದಾಖಲಿಸಿದ್ದೇವೆ. ಇವರನ್ನು ತಲುಪುವ ಪೆಡ್ಲರ್‌ಗಳ ಜಾಲವನ್ನು ಪತ್ತೆ ಹಚ್ಚಬೇಕು ಎಂದರು.
ಡ್ರಗ್ ಸರಬರಾಜು ಮಾಡಲು ಕಳ್ಳ ಮಾರ್ಗ ಹಿಡಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಪೋಷಕರೇ ತಮ್ಮ‌ ಮಕ್ಕಳ ನಡವಳಿಕೆ ಮೇಲೆ ಗಮನ ಹರಿಸಬೇಕು. ಇಲ್ಲವಾದರೆ, ಡ್ರಗ್ ಜಾಲವನ್ನು ತಡೆಯಲು ಸಾಧ್ಯವಿಲ್ಲ. ವಿಪರ್ಯಾಸವೆಂದರೆ, ಪೋಷಕರಿಗೆ ತಮ್ಮ ಮಕ್ಕಳು ಡ್ರಗ್‌ ಸೇವನೆ ಮಾಡುತ್ತಿರುವ ಬಗ್ಗೆ ಮಾಹಿತಿಯೇ ಇಲ್ಲವಾಗಿದೆ ಎಂದರು. 
ಕಾರ್ಯಕ್ರಮದಲ್ಲಿ ಫೋರ್ಟಿಸ್ ಹೆಲ್ತ್‌ಕೇರ್‌ ಸಿಒಒ ಆಶೀಶ್‌ ಭಟೀಯಾ, ನ್ಯಾಷನಲ್ ಮೆಂಟಲ್ ಹೆಲ್ತ್‌ ಕಾರ್ಯಕ್ರಮದ ನಿರ್ದೇಶಕ ಡಾ. ಸಮೀರ್‌ ಪರೀಕ್,
ಫೋರ್ಟಿಸ್‌ ಆಸ್ಪತ್ರೆ ಉಪಾಧ್ಯಕ್ಷ ಡಾ. ಮನೀಶ್‌ ಮಟ್ಟು, ಮನೋತಜ್ಞ ಡಾ. ವೆಂಕಟೇಶ್ ಬಾಬು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ